ಉಡುಪಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸೌದಿ ದೊರೆ ಬಗ್ಗೆ ಅವಹೇಳನ ಮಾಡಿರುವ ಆರೋಪದಲ್ಲಿ ಕುಂದಾಪುರದ ಯುವಕ ಅರೆಸ್ಟ್ ಆಗಿದ್ದಾನೆ.
ಸೌದಿಯ ದಮಾಮ್ ನ ಕಂಪನಿಯಲ್ಲಿ ಕುಂದಾಪುರ ಮೂಲದ ಹರೀಶ್ ಬಂಗೇರ ಕೆಲಸ ಮಾಡುತ್ತಿದ್ದಾನೆ. ಈತ ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಕಾಯ್ದೆಯ ಪರ ಬರೆದು ಪೋಸ್ಟ್ ಮಾಡಿದ್ದರು. ಈ ಬರಹದ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಕೂಡಲೇ ಹರೀಶ್, ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದ ವೀಡಿಯೋ ಅಪ್ಲೋಡ್ ಮಾಡಿದ್ದನು.
ಇದಾದ ಕೂಡಲೇ ಹರೀಶ್ ಬಂಗೇರ ಎಂಬ ಮತ್ತೊಂದು ಅಕೌಂಟಲ್ಲಿ ಸೌದಿ ದೊರೆಗೆ ಅವಹೇಳನ ಮಾಡಿದ ಫೋಟೋ, ಬರಹ ಅಪ್ಲೋಡಾಗಿದೆ. ಈ ಪೋಸ್ಟ್ ಸೌದಿಯಲ್ಲಿ ಶೇರ್ ಆಗಿದೆ. ಹರೀಶ್ ನನ್ನು ಸೌದಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಆದರೆ ಈ ಮಧ್ಯೆ ಇವರ ಹೆಸರಿನಲ್ಲಿ ಬೇರೆಯವರು ಯಾರೋ ನಕಲಿ ಖಾತೆ ತೆರೆದು ಅದರಲ್ಲಿ ಅಲ್ಲಿನ ರಾಜ, ಮೆಕ್ಕಾ ಬಗ್ಗೆ ನಿಂದನಾತ್ಮಕ ಬರಹ ಬರೆದು ಹಾಕಿದ್ದರಿಂದ ಮತ್ತೆ ಸಮಸ್ಯೆ ಸೃಷ್ಟಿಯಾಗಿದ್ದು, ಇದರಿಂದ ಹರೀಶ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…