ಉಡುಪಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸೌದಿ ದೊರೆ ಬಗ್ಗೆ ಅವಹೇಳನ ಮಾಡಿರುವ ಆರೋಪದಲ್ಲಿ ಕುಂದಾಪುರದ ಯುವಕ ಅರೆಸ್ಟ್ ಆಗಿದ್ದಾನೆ.
ಸೌದಿಯ ದಮಾಮ್ ನ ಕಂಪನಿಯಲ್ಲಿ ಕುಂದಾಪುರ ಮೂಲದ ಹರೀಶ್ ಬಂಗೇರ ಕೆಲಸ ಮಾಡುತ್ತಿದ್ದಾನೆ. ಈತ ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಕಾಯ್ದೆಯ ಪರ ಬರೆದು ಪೋಸ್ಟ್ ಮಾಡಿದ್ದರು. ಈ ಬರಹದ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಕೂಡಲೇ ಹರೀಶ್, ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದ ವೀಡಿಯೋ ಅಪ್ಲೋಡ್ ಮಾಡಿದ್ದನು.
ಇದಾದ ಕೂಡಲೇ ಹರೀಶ್ ಬಂಗೇರ ಎಂಬ ಮತ್ತೊಂದು ಅಕೌಂಟಲ್ಲಿ ಸೌದಿ ದೊರೆಗೆ ಅವಹೇಳನ ಮಾಡಿದ ಫೋಟೋ, ಬರಹ ಅಪ್ಲೋಡಾಗಿದೆ. ಈ ಪೋಸ್ಟ್ ಸೌದಿಯಲ್ಲಿ ಶೇರ್ ಆಗಿದೆ. ಹರೀಶ್ ನನ್ನು ಸೌದಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಆದರೆ ಈ ಮಧ್ಯೆ ಇವರ ಹೆಸರಿನಲ್ಲಿ ಬೇರೆಯವರು ಯಾರೋ ನಕಲಿ ಖಾತೆ ತೆರೆದು ಅದರಲ್ಲಿ ಅಲ್ಲಿನ ರಾಜ, ಮೆಕ್ಕಾ ಬಗ್ಗೆ ನಿಂದನಾತ್ಮಕ ಬರಹ ಬರೆದು ಹಾಕಿದ್ದರಿಂದ ಮತ್ತೆ ಸಮಸ್ಯೆ ಸೃಷ್ಟಿಯಾಗಿದ್ದು, ಇದರಿಂದ ಹರೀಶ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…