ನವದೆಹಲಿ : ‘ಸಾಮಾಜಿಕ ಜಾಲತಾಣ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕೆಂಬ ಮನವಿಗೆ ಸಂಬಂಧಿಸಿದಂತೆ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ಗೆ ವರ್ಗಾಯಿಸಬೇಕು’ ಎಂದು ಫೇಸ್ಬುಕ್ ಸಂಸ್ಥೆ ಮಾಡಿರುವ ಮನವಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿದೆ.
ನ್ಯಾಯಮೂರ್ತಿಗಳಾದ ದೀಪಕ್ ಗುಪ್ತ ಹಾಗೂ ಅನಿರುದ್ಧ ಬೋಸ್ ಅವರನ್ನೊಳಗೊಂಡ ಪೀಠವು ಕೇಂದ್ರ ಸರ್ಕಾರ, ಗೂಗಲ್, ಟ್ವಿಟರ್, ಯೂಟ್ಯೂಬ್ ಹಾಗೂ ಇತರ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 13ರ ಒಳಗಾಗಿ ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.
ಆಧಾರ್ ಜೋಡಣೆಗೆ ಸಂಬಂಧಿಸಿದಂತೆ ಪ್ರಸಕ್ತ ನಡೆಯುತ್ತಿರುವ ವಿಚಾರಣೆಯನ್ನು ಮುಂದುವರಿಸಬಹುದು. ಆದರೆ ಈ ಸಂಬಂಧ ಅಂತಿಮ ಆದೇಶವನ್ನು ನೀಡಬಾರದು ಎಂದು ಪೀಠವು ಮದ್ರಾಸ್ ಹೈಕೋರ್ಟ್ಗೆ ಸೂಚನೆ ನೀಡಿದೆ.
ಫೇಸ್ಬುಕ್, ಟ್ವಿಟರ್, ವಾಟ್ಸಪ್ ಸೇರಿದಂತೆ ಇನ್ನಿತರ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಮ್ಮ ಪ್ರೊಫೈಲ್ಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಬೇಕೆಂಬ ಫೇಸ್ಬುಕ್ ಕೋರಿಕೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿ ನೀಡಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…