ಮಂಗಳೂರು: ಹಿಂದುಳಿದ ವರ್ಗಗಳ ಮುಖಂಡರಾಗಿ ಸಾಮಾಜಿಕ ನ್ಯಾಯದ ಬಗ್ಗೆ ವಿಶೇಷ ಕಾಳಜಿ ಇಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆ ಮಾದರಿಯಾದದ್ದು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಿಣ ದೇವರಾಜ ಅರಸು ಅವರ ದಾರಿಯಲ್ಲೇ ರಾಜ್ಯದ ಸೇವೆ ಮಾಡಿ ಮುನ್ನಡೆಸಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿದ ಶೇ.95ಕ್ಕೂ ಅಧಿಕ ಭರವಸೆ ಈಡೇರಿಸಿದ ಅವರ ಹಲವು ಕಾರ್ಯಕ್ರಮಗಳು ಇಂದಿಗೂ ಮೆಚ್ಚುಗೆ ಪಡೆದುಕೊಂಡಿವೆ ಎಂದರು.
ಗ್ಯಾರಂಟಿ ಅನುಷ್ಠಾನದ ಮೂಲಕ ಜನ ಮೆಚ್ಚುವ ಕೆಲಸ ಮಾಡಿರುವ ಅವರು ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದ ಸಂದರ್ಭ ಅಕ್ಕಿ ಬದಲು ಹಣ ನೀಡುವ ನಿರ್ಧಾರ ಕೈಗೊಂಡಿದ್ದರು ಎಂದರು.
ಆಹಾರ ಭದ್ರತೆ ಕಾಯ್ದೆ ಅನುಷ್ಠಾನಗೈದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ದ.ಕ. ಜಿಲ್ಲೆಗೂ ಅವರ ಕೊಡುಗೆ ಅಪಾರ ಎಂದು ವಿವರಿಸಿದರು. ಬ್ಲಾಕ್ ಅಧ್ಯಕ್ಷ ಪದ್ಮನಾಭ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…