Featured

ಸಾಯೋವರೆಗೂ ಸಿದ್ದರಾಮಯ್ಯನವರ ಬೆನ್ನಿಗೆ ಬಂಡೆಯಂತೆ  ಇರ್ತೇನೆ , ಇದು ಕನಕಪುರ ಬಂಡೆಯ ಇತಿಹಾಸ: ಡಿಸಿಎಂ ಡಿಕೆಶಿ – vishwanews24

ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ

2028ರಲ್ಲಿ ನಾವೇ ಅಧಿಕಾರಕ್ಕೆ ಬರುವುದು, ಇದನ್ನು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ..

ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ..

ಹಾಸನ:ಈ ಡಿ.ಕೆ. ಶಿವಕುಮಾರ್​​​​ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಉಚ್ಚರಿಸಿದರು.

ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಶಿವಕುಮಾರ್​​​ ಅವರು ಮಾತನಾಡಿ “ಕಾಂಗ್ರೆಸ್​​​​​​ ಪಕ್ಷದ ಜನಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಮೊದಲು ಹಾಸನಾಂಬೆ ತಾಯಿಯ ಪಾದಗಳಿಗೆ ಸಾಷ್ಟಾಂಗ ನಮನ ಮಾಡುತ್ತೇನೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅಧಿಕಾರಕ್ಕೆ ಬಂದಂತೆ. 25 ವರ್ಷಗಳ ನಂತರ ಹಾಸನದ ಮಹಾಜನತೆ ಕಾಂಗ್ರೆಸ್​​ ಪಕ್ಷದ ಯುವಕನನ್ನು ಸಂಸತ್ತಿಗೆ ಕಳಿಸಿದ್ದೀರಿ. ಈ ಭಾಗದ ಧ್ವನಿಯಾಗಲು, ನೊಂದ ತಾಯಂದಿರಿಗೆ ರಕ್ಷಣೆ ನೀಡಲು ಶ್ರೇಯಸ್ ಪಟೇಲ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ನಿಮಗೆ ನಮಸ್ಕಾರ” ಎಂದರು.

ಐದು ಗ್ಯಾರಂಟಿಗಳು ಪರ್ಮನೆಂಟು: “ಸರ್ಕಾರದ ಶಕ್ತಿ ನೂರೆಂಟು, ಐದು ಗ್ಯಾರಂಟಿಗಳು ಪರ್ಮನೆಂಟು, 2028ರಲ್ಲಿ ನಾವೇ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಇದನ್ನು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸುಳ್ಳಿನ ಸರಮಾಲೆಗಳಿಗೆ ಸಂಡೂರು, ಶಿಗ್ಗಾವಿ, ಚನ್ನಪಟ್ಟಣದಲ್ಲಿ ಜನ ಉತ್ತರ ನೀಡಿದ್ದಾರೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದ ಕಾರಣ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಆರ್ಥಿಕ ಶಕ್ತಿ ತುಂಬಲಾಗಿದೆ ಎಂದು ಹಳೆ ಡೈಲಾಗ್​ ಹೇಳುವ ಮೂಲಕ ಮೈತ್ರಿ ಸರ್ಕಾರಕ್ಕೆ” ಟಾಂಗ್ ನೀಡಿದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

9 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

12 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

12 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

13 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

13 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

13 hours ago