ಸಾಯ್‌ ಟ್ರಯಲ್‌ನಲ್ಲಿ ನಾನು ಭಾಗಿಯಾಗುವುದಿಲ್ಲ, ನನಗೆ ಆ ಬಗ್ಗೆ ಆಸಕ್ತಿ ಇಲ್ಲ ಹಾಗೂ ತಾನು ಕಂಬಳದಲ್ಲೇ ಮುಂದುವರೆಯುತ್ತೇನೆ : ಶ್ರೀನಿವಾಸ ಗೌಡ -Vishwanews24

ಮಂಗಳೂರು : ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್)ದ ಅಗ್ರ ಕೋಚ್‌ಗಳಿಂದ ಟ್ರಯಲ್ಸ್ (ಸಾಮರ್ಥ್ಯ ಪರೀಕ್ಷೆ)ಗೆ ಕಂಬಳ ಓಟಗಾರ ಶ್ರೀನಿವಾಸ ಗೌಡ ಅವರನ್ನು ಆಹ್ವಾನಿಸುವುದಾಗಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ತಿಳಿಸಿದ ಒಂದು ದಿನಗಳ ಬಳಿಕ ಶ್ರೀನಿವಾಸ ಗೌಡ, ತನಗೆ ಆ ಬಗ್ಗೆ ಆಸಕ್ತಿ ಇಲ್ಲ ಹಾಗೂ ತಾನು ಕಂಬಳದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಸೂರ್ಯ – ಚಂದ್ರ ಕಂಬಳ ನಡೆಯುತ್ತಿರುವ ವೇಣೂರು ಪೆರ್ಮುದೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಕಂಬಳದ ಕಾರಣದಿಂದಾಗಿ ಖ್ಯಾತಿ ಗಳಿಸಿರುವುದು ನನಗೆ ಸಂತೋಷವಾಗಿದೆ. ಆ ಕಾರಣಕ್ಕಾಗಿ ಎಲ್ಲರಿಗೂ ಧನ್ಯವಾದಗಳು.

ಸೋಮವಾರ ನಡೆಯಲಿರುವ ಸಾಯ್‌ ಟ್ರಯಲ್‌ನಲ್ಲಿ ನಾನು ಭಾಗಿಯಾಗುವುದಿಲ್ಲ. ಆದರೆ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಹ್ವಾನದಂತೆ ನಾನು ಅವರನ್ನು ಸೋಮವಾರ ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.

ಹಿಮ್ಮಡಿ ಕಂಬಳದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಟ್ರಾಕ್‌ ಓಟದಲ್ಲಿ ಕಾಲ್ಬೆರಳುಗಳು ಪ್ರಮುಖ ಪಾತ್ರ ವಹಿಸುತ್ತದೆ. ಕಂಬಳದಲ್ಲಿ ಓಟಗಾರನಂತೆ ಕೋಣಗಳಿಗೂ ಪ್ರಮುಖ ಪಾತ್ರವಿರುತ್ತದೆ. ಆದರೆ ಟ್ರಾಕ್‌ ಓಟದಲ್ಲಿ ಈ ರೀತಿಯಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಂಬಳ ಓಟದಿಂದ ನನಗೆ ಸಾಕಷ್ಟು ಆದಾಯ ಲಭಿಸುತ್ತದೆ. ಇದರಲ್ಲೇ ನಾನು ಸಂತೋಷವಾಗಿದ್ದೇನೆ ಎಂದು ಶ್ರೀನಿವಾಸ ಗೌಡ ಹೇಳಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago