ಮಂಗಳೂರು : ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್)ದ ಅಗ್ರ ಕೋಚ್ಗಳಿಂದ ಟ್ರಯಲ್ಸ್ (ಸಾಮರ್ಥ್ಯ ಪರೀಕ್ಷೆ)ಗೆ ಕಂಬಳ ಓಟಗಾರ ಶ್ರೀನಿವಾಸ ಗೌಡ ಅವರನ್ನು ಆಹ್ವಾನಿಸುವುದಾಗಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ತಿಳಿಸಿದ ಒಂದು ದಿನಗಳ ಬಳಿಕ ಶ್ರೀನಿವಾಸ ಗೌಡ, ತನಗೆ ಆ ಬಗ್ಗೆ ಆಸಕ್ತಿ ಇಲ್ಲ ಹಾಗೂ ತಾನು ಕಂಬಳದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದಾರೆ.
ಸೂರ್ಯ – ಚಂದ್ರ ಕಂಬಳ ನಡೆಯುತ್ತಿರುವ ವೇಣೂರು ಪೆರ್ಮುದೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಕಂಬಳದ ಕಾರಣದಿಂದಾಗಿ ಖ್ಯಾತಿ ಗಳಿಸಿರುವುದು ನನಗೆ ಸಂತೋಷವಾಗಿದೆ. ಆ ಕಾರಣಕ್ಕಾಗಿ ಎಲ್ಲರಿಗೂ ಧನ್ಯವಾದಗಳು.
ಸೋಮವಾರ ನಡೆಯಲಿರುವ ಸಾಯ್ ಟ್ರಯಲ್ನಲ್ಲಿ ನಾನು ಭಾಗಿಯಾಗುವುದಿಲ್ಲ. ಆದರೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಹ್ವಾನದಂತೆ ನಾನು ಅವರನ್ನು ಸೋಮವಾರ ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.
ಹಿಮ್ಮಡಿ ಕಂಬಳದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಟ್ರಾಕ್ ಓಟದಲ್ಲಿ ಕಾಲ್ಬೆರಳುಗಳು ಪ್ರಮುಖ ಪಾತ್ರ ವಹಿಸುತ್ತದೆ. ಕಂಬಳದಲ್ಲಿ ಓಟಗಾರನಂತೆ ಕೋಣಗಳಿಗೂ ಪ್ರಮುಖ ಪಾತ್ರವಿರುತ್ತದೆ. ಆದರೆ ಟ್ರಾಕ್ ಓಟದಲ್ಲಿ ಈ ರೀತಿಯಿಲ್ಲ ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಂಬಳ ಓಟದಿಂದ ನನಗೆ ಸಾಕಷ್ಟು ಆದಾಯ ಲಭಿಸುತ್ತದೆ. ಇದರಲ್ಲೇ ನಾನು ಸಂತೋಷವಾಗಿದ್ದೇನೆ ಎಂದು ಶ್ರೀನಿವಾಸ ಗೌಡ ಹೇಳಿದ್ದಾರೆ.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…