Featured

ಸಾರಿಗೆ ಉದ್ಯಮಿ ಪಾಂಗಳ ರಬೀಂದ್ರ ನಾಯಕ್ ನಿಧನ -Vishwanews24

ಸಾರಿಗೆ ಉದ್ಯಮಿ ಪಾಂಗಳ ರಬೀಂದ್ರ ನಾಯಕ್ ನಿಧನ -Vishwanews24

ಉಡುಪಿ: ಹಿರಿಯ ಸಾರಿಗೆ ಉದ್ಯಮಿ ಪಾಂಗಳ ರಬೀಂದ್ರ ನಾಯಕ್ (99) ವಯೋಸಹಜ ಅನಾರೋಗ್ಯದಿಂದ ಶನಿವಾರ ಬೆಳಗ್ಗೆ ಬುಡ್ನಾರಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

1922ರ ಫೆಬ್ರವರಿ 9ರಂದು ಉಡುಪಿಯಲ್ಲಿ ಜನಿಸಿದ ಅವರು, ಬಾಂಬೆ ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀ ಪಡೆದು ಸ್ವಲ್ಪ ಸಮಯ ಖಾಸಗಿ ಕಂಪೆನಿಯಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ 1951ರಲ್ಲಿ ಹನುಮಾನ್ ಟ್ರಾನ್ಸ್‌ಪೋರ್ಟ ಕಂಪನಿಗೆ ಸೇರಿ 1972ರಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ, ನಂತರ ಶಿವಮೊಗ್ಗದ ಶ್ರೀಗಜಾನನ ಮೋಟಾರ್ ಟ್ರಾನ್ಸ್‌ಪೋರ್ಟ ಕಂಪೆನಿ ವ್ಯವಸ್ಥಾಪಕ ನಿರ್ದೇಶಕರಾಗಿ 70ರ ದಶಕದಲ್ಲಿ ಅವಿಭಜಿತ ದ .ಕ. ಜಿಲ್ಲೆ ಸಹಿತ ಮಲೆನಾಡು ಭಾಗದಲ್ಲಿ ಹಳ್ಳಿಗೆ ಬಸ್ ಸೇವೆ ತಲುಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.

ಉಡುಪಿ ಜಿಲ್ಲಾಸ್ಪತ್ರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಜಿಲ್ಲಾಸ್ಪತ್ರೆಯ ಅಭಿವೃದ್ಧಿಗೆ ದೇಣಿಗೆಯನ್ನು ನೀಡಿದ್ದರು. ಉಡುಪಿಯ ಹಿರಿಯ ನಾಗರಿಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮಂಗಳೂರು: ಪೊಲೀಸ್ ಸಿಬ್ಬಂದಿ ಹೃದಯಘಾತದಿಂದ ನಿಧನ -Vishwanews24

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago