ಉಡುಪಿ: ಹಿರಿಯ ಸಾರಿಗೆ ಉದ್ಯಮಿ ಪಾಂಗಳ ರಬೀಂದ್ರ ನಾಯಕ್ (99) ವಯೋಸಹಜ ಅನಾರೋಗ್ಯದಿಂದ ಶನಿವಾರ ಬೆಳಗ್ಗೆ ಬುಡ್ನಾರಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
1922ರ ಫೆಬ್ರವರಿ 9ರಂದು ಉಡುಪಿಯಲ್ಲಿ ಜನಿಸಿದ ಅವರು, ಬಾಂಬೆ ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀ ಪಡೆದು ಸ್ವಲ್ಪ ಸಮಯ ಖಾಸಗಿ ಕಂಪೆನಿಯಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ 1951ರಲ್ಲಿ ಹನುಮಾನ್ ಟ್ರಾನ್ಸ್ಪೋರ್ಟ ಕಂಪನಿಗೆ ಸೇರಿ 1972ರಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ, ನಂತರ ಶಿವಮೊಗ್ಗದ ಶ್ರೀಗಜಾನನ ಮೋಟಾರ್ ಟ್ರಾನ್ಸ್ಪೋರ್ಟ ಕಂಪೆನಿ ವ್ಯವಸ್ಥಾಪಕ ನಿರ್ದೇಶಕರಾಗಿ 70ರ ದಶಕದಲ್ಲಿ ಅವಿಭಜಿತ ದ .ಕ. ಜಿಲ್ಲೆ ಸಹಿತ ಮಲೆನಾಡು ಭಾಗದಲ್ಲಿ ಹಳ್ಳಿಗೆ ಬಸ್ ಸೇವೆ ತಲುಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.
ಉಡುಪಿ ಜಿಲ್ಲಾಸ್ಪತ್ರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಜಿಲ್ಲಾಸ್ಪತ್ರೆಯ ಅಭಿವೃದ್ಧಿಗೆ ದೇಣಿಗೆಯನ್ನು ನೀಡಿದ್ದರು. ಉಡುಪಿಯ ಹಿರಿಯ ನಾಗರಿಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…