ಲಕ್ನೋ: ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿ ಉಂಟುಮಾಡಿದರೆ ಗಲಭೆಕೋರಿಂದ ಅದರ ನಷ್ಟ ವಸೂಲಿ ಮಾಡಲಾಗುವುದು ಯಾಕೆಂದರೆ ಉತ್ತರ ಪ್ರದೇಶ ಸರ್ಕಾರ ಯಾವುದೇ ಕಾರಣಕ್ಕೂ ಅರಾಜಕತೆಯನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಹೇಳಿದ್ದಾರೆ.
ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ಹಾನಿಯ ನಷ್ಟ ಮರಳಿ ಪಡೆಯುವಿಕೆ ನಿಯಮ 2020ರಂತೆ ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿ ಉಂಟುಮಾಡಿದ ದುಷ್ಕರ್ಮಿಗಳಿಂದಲೇ ನಷ್ಟ ಪರಿಹಾರ ಪಡೆಯಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಜಾನ್ಸಿ, ಕಾನ್ಪುರ್, ಚಿತ್ರಕೂತ್ ಧಾಮ್, ಲಕ್ನೋ , ಅಯೋಧ್ಯೆ, ದೇವಿ ಪತನ್ ಪ್ರಯಾಗ್ ರಾಜ್ , ಅಜಮ್ಗರ್, ವಾರಣಾಸಿ, ಗೋರಖ್ಪುರ, ಬಸ್ತಿ ಮತ್ತು ವಿಂಧ್ಯಾಚಲ್ ಧಾಮ್ ವಿಭಾಗಗಳನ್ನು ಲಕ್ನೋಗಳಲ್ಲಿ ನ್ಯಾಯಮಂಡಳಿಯಲ್ಲಿ ಅಂಗೀಕರಿಸಲಾಗುವುದು. ಇದಲ್ಲದೆ, ಮೀರತ್ ನ್ಯಾಯಮಂಡಳಿಯು ಸಹರಾನ್ಪುರ, ಮೀರತ್ , ಮೊರಾದಾಬಾದ್, ಬರೇಲಿ ಮತ್ತು ಆಗ್ರಾ ವಿಭಾಗಗಳ ವ್ಯಾಪ್ತಿಯನ್ನು ಕೂಡ ಹೊಂದಿರುತ್ತದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಉತ್ತರಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪ್ರತಿಭಟನೆಗಳು ಭುಗಿಲೆದ್ದ ನಂತರ, ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗುವ ವೆಚ್ಚವನ್ನು ಪ್ರತಿಭಟನಾಕಾರರಿಂದ ವಸೂಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಎಚ್ಚರಿಸಿದ್ದರು. ಇದಕ್ಕಾಗಿ ಹಾನಿಯಿಂದಾದ ನಷ್ಟ ಮರುಪಡೆಯಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ಪ್ರಕಟಿಸಿತ್ತು. ಅಲ್ಲದೆ ಇಂತಹ ಪ್ರಕರಣ ಇತ್ಯರ್ಥಗೊಳಿಸಲು ನ್ಯಾಯಮಂಡಳಿಗಳನ್ನು ಸ್ಥಾಪಿಸಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…