ನವದೆಹಲಿ: ಈಡೇರಿಸಲು ಸಾಧ್ಯವಿಲ್ಲದ ಭರವಸೆಗಳನ್ನು, ತಮ್ಮ ವ್ಯಾಪ್ತಿಗೆ ಬಾರದ ವಿಷಯಗಳ ಬಗ್ಗೆ ಭರವಸೆಗಳನ್ನು ನೀಡಬಾರದು ಎಂದು ಸಂಪುಟ ಸಹೋದ್ಯೋಗಿಗಳಲ್ಲಿ ಮೋದಿ ಮನವಿ ಮಾಡಿದ್ದಾರೆ.
ಸಚಿವರು ಇತ್ತೀಚಿನ ದಿನಗಳಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದಂತೆ ತಮ್ಮ ವ್ಯಾಪ್ತಿಗೆ ಬಾರದ ವಿಷಯಗಳ ಬಗ್ಗೆ ಹೇಳಿಕೆ ನೀಡುತ್ತಿರುವುದರ ಬಗ್ಗೆ ಪ್ರಧಾನಿ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ.
ಕಾಶ್ಮೀರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳನ್ನು ಮಾಡುವುದು ಬೇಡ ಎಂದು ಮೋದಿ ಸಚಿವರುಗಳಲ್ಲಿ ವಿನಂತಿಸಿದ್ದಾರೆ.
ಆರ್ಟಿಕಲ್ 370 ರದ್ದುಗೊಂಡಿರುವುದು ಪ್ರತಿಯೊಂದು ಸಚಿವಾಲಯಕ್ಕೂ ಸಂಬಂಧಪಟ್ಟ ವಿಷಯ. ಅಧಿಕಾರಿಗಳ ಮೂಲಕ ಸಚಿವರುಗಳು ಕಣಿವೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕು. ಆರ್ಟಿಕಲ್ 370 ರದ್ದತಿ ಹೇಗೆ ಬದಲಾವಣೆ ತರಲಿದೆ ಎಂಬುದನ್ನು ಜನತೆಗೆ ಮನವರಿಕೆ ಮಾಡಬೇಕು ಎಂದು ಪ್ರಧಾನಿ ಮೋದಿ ಸಚಿವರುಗಳಿಗೆ ಸಲಹೆ ನೀಡಿದ್ದಾರೆ.
ಸಕಾಲಕ್ಕೆ ಕಚೇರಿಗೆ ಹಾಜರಾಗದಿರುವುದರಿಂದ ತಪ್ಪು ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಎಲ್ಲ ಸಚಿವರು ಬೆಳಗ್ಗೆ 9.30ಕ್ಕೆ ಸರಿಯಾಗಿ ತಮ್ಮ ಕಚೇರಿಗಳಲ್ಲಿ ಹಾಜರಿರಬೇಕು ಎಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…