Featured

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅನಾವಶ್ಯಕ ಭರವಸೆಗಳನ್ನು ನೀಡಬಾರದು : ಸಹೋದ್ಯೋಗಿಗಳಲ್ಲಿ ಮೋದಿ ಮನವಿ

ನವದೆಹಲಿ: ಈಡೇರಿಸಲು ಸಾಧ್ಯವಿಲ್ಲದ ಭರವಸೆಗಳನ್ನು, ತಮ್ಮ ವ್ಯಾಪ್ತಿಗೆ ಬಾರದ ವಿಷಯಗಳ ಬಗ್ಗೆ ಭರವಸೆಗಳನ್ನು ನೀಡಬಾರದು ಎಂದು ಸಂಪುಟ ಸಹೋದ್ಯೋಗಿಗಳಲ್ಲಿ ಮೋದಿ ಮನವಿ ಮಾಡಿದ್ದಾರೆ.

ಸಚಿವರು ಇತ್ತೀಚಿನ ದಿನಗಳಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದಂತೆ ತಮ್ಮ ವ್ಯಾಪ್ತಿಗೆ ಬಾರದ ವಿಷಯಗಳ ಬಗ್ಗೆ ಹೇಳಿಕೆ ನೀಡುತ್ತಿರುವುದರ ಬಗ್ಗೆ ಪ್ರಧಾನಿ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ.

ಕಾಶ್ಮೀರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳನ್ನು ಮಾಡುವುದು ಬೇಡ ಎಂದು ಮೋದಿ ಸಚಿವರುಗಳಲ್ಲಿ ವಿನಂತಿಸಿದ್ದಾರೆ.

ಆರ್ಟಿಕಲ್ 370 ರದ್ದುಗೊಂಡಿರುವುದು ಪ್ರತಿಯೊಂದು ಸಚಿವಾಲಯಕ್ಕೂ ಸಂಬಂಧಪಟ್ಟ ವಿಷಯ. ಅಧಿಕಾರಿಗಳ ಮೂಲಕ ಸಚಿವರುಗಳು ಕಣಿವೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕು. ಆರ್ಟಿಕಲ್ 370 ರದ್ದತಿ ಹೇಗೆ ಬದಲಾವಣೆ ತರಲಿದೆ ಎಂಬುದನ್ನು ಜನತೆಗೆ ಮನವರಿಕೆ ಮಾಡಬೇಕು ಎಂದು ಪ್ರಧಾನಿ ಮೋದಿ ಸಚಿವರುಗಳಿಗೆ ಸಲಹೆ ನೀಡಿದ್ದಾರೆ.

ಸಕಾಲಕ್ಕೆ ಕಚೇರಿಗೆ ಹಾಜರಾಗದಿರುವುದರಿಂದ ತಪ್ಪು ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಎಲ್ಲ ಸಚಿವರು ಬೆಳಗ್ಗೆ 9.30ಕ್ಕೆ ಸರಿಯಾಗಿ ತಮ್ಮ ಕಚೇರಿಗಳಲ್ಲಿ ಹಾಜರಿರಬೇಕು ಎಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

3 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

4 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago