Featured

ಸಾರ್ವಜನಿಕ ಗಣೇಶೋತ್ಸವ : ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ – ಹೊಸ ಮಾರ್ಗಸೂಚಿ ಪ್ರಕಟ -Vishwanews24

ಬೆಂಗಳೂರು,: ಕೋವಿಡ್ ಭೀತಿಯ ಕಾರಣದಿಂದ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಿ , ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಯನ್ನು ನಿಷೇಧಿಸಿ ಹೊರಡಿಸಿದ್ದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಪರಿಷ್ಕೃತಗೊಳಿಸಿದ್ದು ಇದೀಗ ಹೊಸ ನಿಯಮ ರೂಪಿಸಿ ಸಂಘ ಸಂಸ್ಥೆಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪನೆ ಗ್ರೀನ್ ಸಿಗ್ನಲ್ ನೀಡಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ” ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ” ಎಂದು ಬರೆದುಕೊಂಡಿದ್ದಾರೆ.

ಪರಿಷ್ಕೃತ ಮಾರ್ಗಸೂಚಿ ಇಂತಿದೆ:

1. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವವರು ಮೂರ್ತಿ ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಪ್ರತಿಷ್ಠಾಪನೆ ಮಾಡುವವರು ಎರಡು ಅಡಿ ಮೀರದಂತೆ ಪ್ರತಿಷ್ಠಾಪನೆ ಮಾಡಬೇಕು.

2. ಪಾರಂಪರಿಕವಾಗಿ ಗಣೇಶೋತ್ಸವ ಮಾಡುವಲ್ಲಿ ಗಣೇಶೋತ್ಸವ ಸಮಿತಿ ಅಥವಾ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್‌ ಕಾರ್ಪೋರೇಷನ್‌ ಅಥವಾ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಒಂದು ವಾರ್ಡ್ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.

3. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದ ಒಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬಹುದು.

4. ಗಣೇಶೋತ್ಸವದ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಾಣ ಮಾಡಬೇಕು. ಒಮ್ಮೆಲೆ 20 ಕ್ಕಿಂತ ಅಧಿಕ ಜನರು ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.

5. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹೀಗೆ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವ ಅವಕಾಶವಿಲ್ಲ.

6. ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

7. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜನೆ ಮಾಡುವುದು ಮತ್ತು ಸರ್ಕಾರಿ ಅಥವಾ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪನ ಮಾಡಿವವರು ಗಣೇಶ ಮೂರ್ತಿಯನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ ಅಥವಾ ಜಿಲ್ಲಾಡಳಿತ ಅಥವಾ ಹತ್ತಿರದ ಸ್ಥಳೀಯ ಸಂಸ್ಥೆಗಳ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್‌ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸುವುದು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

2 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago