ಉಡುಪಿ

ಸಾರ್ವಜನಿಕ ಗಣೇಶೋತ್ಸವ : ಸಂಪೂರ್ಣವಾಗಿ ನಿರ್ಭಂಧಿಸಿರುವುದನ್ನು ಸರಕಾರ ಪುರ್ನವಿಮರ್ಶಿಸಿ ಸರಳ ರೀತಿಯಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಬೇಕು : ಉಡುಪಿ ಜಿಲ್ಲಾ ಕಾಂಗ್ರೆಸ್ -Vishwanews24

ಉಡುಪಿ: ಜಾತಿ, ಮತ ಬೇಧಬಾವವಿಲ್ಲದೆ ಎಲ್ಲಾ ವರ್ಗದವರೂ ಪಾಲ್ಗೊಳ್ಳುವ ಈ ಹಬ್ಬವನ್ನು ಸಂಪೂರ್ಣವಾಗಿ ನಿರ್ಭಂಧಿಸಿರುವುದನ್ನು ಸರಕಾರ ಪುರ್ನವಿಮರ್ಶಿಸಿ ಸರಳ ರೀತಿಯಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ,

ಕೋವಿಡ್-19 ನೆಪ ಹೇಳಿ ರಾಜ್ಯ ಸರಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ಸಂಪೂರ್ಣ ನಿರ್ಬಂಧಿಸಿರುವುದು ಸಮಂಜಸವಲ್ಲ. ಗಣೇಶೋತ್ಸವವನ್ನು ಸರಳವಾಗಿ ಆಚರಿಸಬೇಕು ಎನ್ನುವ ಈ ಹಿಂದಿನ ಸರಕಾರದ ನಿರ್ಧಾರಕ್ಕೆ ಧಾರ್ಮಿಕ ಬಂಧುಗಳು ಸಹಮತ ವ್ಯಕ್ತಪಡಿಸಿರುವಾಗ ಈಗಾಗಲೇ ಸಾರ್ವಜನಿಕ ಗಣೇಶೋತ್ಸವವನ್ನು ನಡೆಸಲು ಪೂರ್ವ ತಯಾರಿ ನಡೆಸಿರುವ ಸಂಸ್ಥೆಗಳ ಪಾಡೇನು ? ಸಾರ್ವಜನಿಕ ಗಣೇಶೋತ್ಸವ ನಿಷೇಧಿಸಿ ತಮ್ಮ ತಮ್ಮ ಮನೆಗಳಲ್ಲಿಯೇ ಗಣೇಶ ಮೂರ್ತಿಯನ್ನು ಇಟ್ಟು ಧಾರ್ಮಿಕ ಆಚರಣೆಗಳನ್ನು ಮಾಡಬೇಕು ಎನ್ನುವ ಸರಕಾರದ ಮಾರ್ಗಸೂಚಿ ಸಾರ್ವಜನಿಕರ ಧಾರ್ಮಿಕ ಭಾವನೆಗೆ ಘಾಸಿಯಾದಂತೆ.

ರಾಜ್ಯದಲ್ಲಿ ಈಗಾಗಲೇ ಸರಕಾರದ ಮಾರ್ಗಸೂಚಿಯಂತೆ ಸಣ್ಣಪುಟ್ಟ ಸಮಾರಂಭಗಳು ನಡೆಯುತ್ತಿದೆ. ಬಾರ್, ಜಿಮ್, ದೇವಸ್ಥಾನಗಳು, ವ್ಯಾಪಾರ ಕೇಂದ್ರಗಳು ಕಾರ್ಯಚರಿಸುತ್ತಿವೆ. ಸಚಿವರುಗಳು, ಅಧಿಕಾರಿಗಳ ಜನ ಸಂಪರ್ಕ ಸಭೆಗಳು ನಿರಾತಂಕವಾಗಿ ನಡೆಯುತ್ತಿದೆ. ಹೀಗಿರುವಾಗ ಸರಕಾರ ಧಾರ್ಮಿಕ ಭಾವನೆಗೆ ಧಕ್ಕೆ ತರದಂತೆ ಸರಕಾರದ ಮಾರ್ಗಸೂಚಿಯಂತೆ ಗಣೇಶೋತ್ಸವ ಆಚರಿಸಲು ಅನುಮತಿ ನೀಡಬೇಕು. ಜಾತಿ, ಮತ ಬೇಧಬಾವವಿಲ್ಲದೆ ಎಲ್ಲಾ ವರ್ಗದವರೂ ಪಾಲ್ಗೊಳ್ಳುವ ಈ ಹಬ್ಬವನ್ನು ಸಂಪೂರ್ಣವಾಗಿ ನಿರ್ಭಂಧಿಸಿರುವುದನ್ನು ಸರಕಾರ ಪುರ್ನವಿಮರ್ಶಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಸರಕಾರವನ್ನು ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

2 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago