Featured

ಸಾರ್ವಜನಿಕ ಭಾಷಣದ ಘನತೆ, ಪ್ರಧಾನಿ ಸ್ಥಾನದ ಗೌರವ ಕಡಿಮೆ ಮಾಡಿದ ಮೊದಲ ಪ್ರಧಾನಿ ಮೋದಿ: ಮನಮೋಹನ್ ಸಿಂಗ್ ಕಿಡಿ – vishwanews24

“ನಾನು ನನ್ನ ಜೀವನದಲ್ಲಿ ಎಂದಿಗೂ ಒಂದು ಸಮುದಾಯದಿಂದ ಇನ್ನೊಂದು ಸಮುದಾಯವನ್ನು ಪ್ರತ್ಯೇಕಿಸಿಲ್ಲ: ಮನಮೋಹನ್‌ ಸಿಂಗ್‌

ನವದೆಹಲಿ: 2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಡಕು ಮೂಡಿಸುವ ಭಾಷಣಗಳನ್ನು ಮಾಡುವ ಮೂಲಕ ಸಾರ್ವಜನಿಕ ಭಾಷಣದ ಘನತೆ ಮತ್ತು ಪ್ರಧಾನಿ ಹುದ್ದೆಯ ಗೌರವ ಕಡಿಮೆ ಮಾಡಿದ ಮೊದಲ ಪ್ರಧಾನಿ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗುರುವಾರ ಟೀಕಿಸಿದ್ದಾರೆ.

ಜೂನ್ 1 ರಂದು ನಡೆಯಲಿರುವ ಏಳನೇ ಮತ್ತು ಅಂತಿಮ ಹಂತದ ಲೋಕಸಭೆ ಚುನಾವಣೆಗೆ ಮುನ್ನ ಪಂಜಾಬ್‌ನಲ್ಲಿ ಮತದಾರರಿಗೆ ಪತ್ರದ ಮೂಲಕ ಮನವಿ ಮಾಡಿದ ಮನಮೋಹನ್ ಸಿಂಗ್, ಮತದಾರರಿಗೆ ಪ್ರೀತಿ, ಶಾಂತಿ, ಭ್ರಾತೃತ್ವ ಮತ್ತು ಸೌಹಾರ್ದತೆಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ.

ಕಾಂಗ್ರೆಸ್ ನಿಂದ ಮಾತ್ರ ಅಭಿವೃದ್ಧಿ ಆಧಾರಿತ ಬೆಳವಣಿಗೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆ ಸಾಧ್ಯ ಎಂದು ಮಾಜಿ ಪ್ರಧಾನಿ ಪ್ರತಿಪಾದಿಸಿದ್ದಾರೆ.

ಮೋದಿಯವರ ಇತ್ತೀಚಿನ ಚುನಾವಣಾ ಪ್ರಚಾರದ ವಾಕ್ಚಾತುರ್ಯದ ವಿರುದ್ಧ ವಾಗ್ದಾಳಿ ನಡೆಸಿದ ಮನಮೋಹನ್ ಸಿಂಗ್, “ಈ ಹಿಂದೆ ಯಾವ ಪ್ರಧಾನಿಯೂ ಸಮಾಜದ ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿಕೊಂಡು ಇಂತಹ ದ್ವೇಷಪೂರಿತ, ಅಸಂಸದೀಯ ಪದಗಳನ್ನು ಬಳಸಿಲ್ಲ” ಎಂದು ಬರೆದಿದ್ದಾರೆ.

“ಮೋದಿ ಜಿ ಅವರು ಅತ್ಯಂತ ಕೆಟ್ಟದಾಗಿ ದ್ವೇಷ ಭಾಷಣಗಳನ್ನು ಮಾಡುತ್ತಿದ್ದಾರೆ. ಇದು ಸಂಪೂರ್ಣವಾಗಿ ಒಡಕು ಮೂಡಿಸುವ ಭಾಷಣಗಳಾಗಿದ್ದು, ಸಾರ್ವಜನಿಕ ಭಾಷಣದ ಘನತೆ ಮತ್ತು ಪ್ರಧಾನಿ ಸ್ಥಾನದ ಗೌರವವನ್ನು ಕಡಿಮೆ ಮಾಡಿದ ಮೊದಲ ಪ್ರಧಾನಿ ಮೋದಿ ಜಿ” ಎಂದು ಮಾಜಿ ಪ್ರಧಾನಿ ಕಿಡಿ ಕಾರಿದ್ದಾರೆ.

“ನಾನು ನನ್ನ ಜೀವನದಲ್ಲಿ ಎಂದಿಗೂ ಒಂದು ಸಮುದಾಯದಿಂದ ಇನ್ನೊಂದು ಸಮುದಾಯವನ್ನು ಪ್ರತ್ಯೇಕಿಸಿಲ್ಲ. ಅದು ಬಿಜೆಪಿಯ ಏಕೈಕ ಹಕ್ಕುಸ್ವಾಮ್ಯ” ಎಂದು ಕಾಂಗ್ರೆಸ್ ಹಿರಿಯ ನಾಯಕ ಟೀಕಿಸಿದ್ದಾರೆ.

ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪನ್ಮೂಲಗಳ ಮೊದಲ ಹಕ್ಕು ಮುಸ್ಲಿಮರಿಗೆ ಇರುತ್ತದೆ ಎಂದು ಮೋದಿ ಆರೋಪಿಸಿದ್ದರು. ಅಲ್ಲದೆ ಇದೇ ಭಾಷಣದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದರು ಎಂದು ಮೋದಿ ಆರೋಪಿಸಿದ್ದರು. ಮೋದಿ ಆರೋಪಗಳ ಹಿನ್ನೆಲೆಯಲ್ಲಿ ಮನಮೋಹನ್ ಸಿಂಗ್ ಅವರು ಇಂದು ಬಹಿರಂಗ ಪತ್ರದ ಮೂಲಕ ತಿರುಗೇಟು ನೀಡಿದ್ದಾರೆ.ನವದೆಹಲಿ: 2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಡಕು ಮೂಡಿಸುವ ಭಾಷಣಗಳನ್ನು ಮಾಡುವ ಮೂಲಕ ಸಾರ್ವಜನಿಕ ಭಾಷಣದ ಘನತೆ ಮತ್ತು ಪ್ರಧಾನಿ ಹುದ್ದೆಯ ಗೌರವ ಕಡಿಮೆ ಮಾಡಿದ ಮೊದಲ ಪ್ರಧಾನಿ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗುರುವಾರ ಟೀಕಿಸಿದ್ದಾರೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago