Featured

ಸಾರ್ವಜನಿಕ ಭಾಷಣದ ಘನತೆ, ಪ್ರಧಾನಿ ಸ್ಥಾನದ ಗೌರವ ಕಡಿಮೆ ಮಾಡಿದ ಮೊದಲ ಪ್ರಧಾನಿ ಮೋದಿ: ಮನಮೋಹನ್ ಸಿಂಗ್ ಕಿಡಿ – vishwanews24

“ನಾನು ನನ್ನ ಜೀವನದಲ್ಲಿ ಎಂದಿಗೂ ಒಂದು ಸಮುದಾಯದಿಂದ ಇನ್ನೊಂದು ಸಮುದಾಯವನ್ನು ಪ್ರತ್ಯೇಕಿಸಿಲ್ಲ: ಮನಮೋಹನ್‌ ಸಿಂಗ್‌

ನವದೆಹಲಿ: 2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಡಕು ಮೂಡಿಸುವ ಭಾಷಣಗಳನ್ನು ಮಾಡುವ ಮೂಲಕ ಸಾರ್ವಜನಿಕ ಭಾಷಣದ ಘನತೆ ಮತ್ತು ಪ್ರಧಾನಿ ಹುದ್ದೆಯ ಗೌರವ ಕಡಿಮೆ ಮಾಡಿದ ಮೊದಲ ಪ್ರಧಾನಿ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗುರುವಾರ ಟೀಕಿಸಿದ್ದಾರೆ.

ಜೂನ್ 1 ರಂದು ನಡೆಯಲಿರುವ ಏಳನೇ ಮತ್ತು ಅಂತಿಮ ಹಂತದ ಲೋಕಸಭೆ ಚುನಾವಣೆಗೆ ಮುನ್ನ ಪಂಜಾಬ್‌ನಲ್ಲಿ ಮತದಾರರಿಗೆ ಪತ್ರದ ಮೂಲಕ ಮನವಿ ಮಾಡಿದ ಮನಮೋಹನ್ ಸಿಂಗ್, ಮತದಾರರಿಗೆ ಪ್ರೀತಿ, ಶಾಂತಿ, ಭ್ರಾತೃತ್ವ ಮತ್ತು ಸೌಹಾರ್ದತೆಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ.

ಕಾಂಗ್ರೆಸ್ ನಿಂದ ಮಾತ್ರ ಅಭಿವೃದ್ಧಿ ಆಧಾರಿತ ಬೆಳವಣಿಗೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆ ಸಾಧ್ಯ ಎಂದು ಮಾಜಿ ಪ್ರಧಾನಿ ಪ್ರತಿಪಾದಿಸಿದ್ದಾರೆ.

ಮೋದಿಯವರ ಇತ್ತೀಚಿನ ಚುನಾವಣಾ ಪ್ರಚಾರದ ವಾಕ್ಚಾತುರ್ಯದ ವಿರುದ್ಧ ವಾಗ್ದಾಳಿ ನಡೆಸಿದ ಮನಮೋಹನ್ ಸಿಂಗ್, “ಈ ಹಿಂದೆ ಯಾವ ಪ್ರಧಾನಿಯೂ ಸಮಾಜದ ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿಕೊಂಡು ಇಂತಹ ದ್ವೇಷಪೂರಿತ, ಅಸಂಸದೀಯ ಪದಗಳನ್ನು ಬಳಸಿಲ್ಲ” ಎಂದು ಬರೆದಿದ್ದಾರೆ.

“ಮೋದಿ ಜಿ ಅವರು ಅತ್ಯಂತ ಕೆಟ್ಟದಾಗಿ ದ್ವೇಷ ಭಾಷಣಗಳನ್ನು ಮಾಡುತ್ತಿದ್ದಾರೆ. ಇದು ಸಂಪೂರ್ಣವಾಗಿ ಒಡಕು ಮೂಡಿಸುವ ಭಾಷಣಗಳಾಗಿದ್ದು, ಸಾರ್ವಜನಿಕ ಭಾಷಣದ ಘನತೆ ಮತ್ತು ಪ್ರಧಾನಿ ಸ್ಥಾನದ ಗೌರವವನ್ನು ಕಡಿಮೆ ಮಾಡಿದ ಮೊದಲ ಪ್ರಧಾನಿ ಮೋದಿ ಜಿ” ಎಂದು ಮಾಜಿ ಪ್ರಧಾನಿ ಕಿಡಿ ಕಾರಿದ್ದಾರೆ.

“ನಾನು ನನ್ನ ಜೀವನದಲ್ಲಿ ಎಂದಿಗೂ ಒಂದು ಸಮುದಾಯದಿಂದ ಇನ್ನೊಂದು ಸಮುದಾಯವನ್ನು ಪ್ರತ್ಯೇಕಿಸಿಲ್ಲ. ಅದು ಬಿಜೆಪಿಯ ಏಕೈಕ ಹಕ್ಕುಸ್ವಾಮ್ಯ” ಎಂದು ಕಾಂಗ್ರೆಸ್ ಹಿರಿಯ ನಾಯಕ ಟೀಕಿಸಿದ್ದಾರೆ.

ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪನ್ಮೂಲಗಳ ಮೊದಲ ಹಕ್ಕು ಮುಸ್ಲಿಮರಿಗೆ ಇರುತ್ತದೆ ಎಂದು ಮೋದಿ ಆರೋಪಿಸಿದ್ದರು. ಅಲ್ಲದೆ ಇದೇ ಭಾಷಣದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದರು ಎಂದು ಮೋದಿ ಆರೋಪಿಸಿದ್ದರು. ಮೋದಿ ಆರೋಪಗಳ ಹಿನ್ನೆಲೆಯಲ್ಲಿ ಮನಮೋಹನ್ ಸಿಂಗ್ ಅವರು ಇಂದು ಬಹಿರಂಗ ಪತ್ರದ ಮೂಲಕ ತಿರುಗೇಟು ನೀಡಿದ್ದಾರೆ.ನವದೆಹಲಿ: 2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಡಕು ಮೂಡಿಸುವ ಭಾಷಣಗಳನ್ನು ಮಾಡುವ ಮೂಲಕ ಸಾರ್ವಜನಿಕ ಭಾಷಣದ ಘನತೆ ಮತ್ತು ಪ್ರಧಾನಿ ಹುದ್ದೆಯ ಗೌರವ ಕಡಿಮೆ ಮಾಡಿದ ಮೊದಲ ಪ್ರಧಾನಿ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗುರುವಾರ ಟೀಕಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago