Featured

ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಮಾಡುವುದಕ್ಕೆ ನಿಷೇಧ ಹೇರಿದ ಹರ್ಯಾಣ ಸರ್ಕಾರ  – Vishwanews24

ಯಾವುದೇ ಧರ್ಮದವರಿಗೂ ಕೂಡ ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಇಲ್ಲ..

ಆಯಾ ಧರ್ಮದವರು ಪ್ರಾರ್ಥನೆ ಸಲ್ಲಿಸಲು ಅವರ ಧಾರ್ಮಿಕ ಕೇಂದ್ರಗಳಿಗೆ ಹೋಗಬೇಕು..

ಸಮಾಜದಲ್ಲಿ ಶಾಂತಿ ಕಾಪಾಡುವುದು ಹಾಗೂ ಸಮಾಜನ ಸ್ವಾಸ್ಥ ಕಾಪಾಡುವುದು ಪ್ರತಿಯೊಬ್ಬನ ಜವಾಬ್ದಾರಿ..

ಹರ್ಯಾಣ ಸಿಎಂ ಮನೋಹರ್‌ ಲಾಲ್ ಖಟ್ಟರ್‌ – VIshwanews24

ಚಂಡೀಗಢ: ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಮಾಡುವುದಕ್ಕೆ ಹರ್ಯಾಣ ಸರ್ಕಾರ ನಿಷೇಧ ಹೇರಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆ ನಡೆಸುವುದಕ್ಕೆ ಹಿಂದೂ ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಹರ್ಯಾಣದ ಬಿಜೆಪಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

ಈ ಬಗ್ಗೆ ವಿಧಾನಸಭೆಯಲ್ಲೇ ಘೋಷಣೆ ಮಾಡಿರುವ ಮುಖ್ಯಮಂತ್ರಿ ಮನೋಹರ್‌ ಲಾಲ್ ಖಟ್ಟರ್‌, ಯಾವುದೇ ಧರ್ಮದವರಿಗೂ ಕೂಡ ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ವಿಧಾನ ಸಭೆಯ ಕಲಾಪದಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕಾಂಗ್ರೆಸ್‌ ಸದಸ್ಯ ಅಫ್ತಾಬ್‌ ಅಹ್ಮದ್‌ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಈ ರೀತಿ ಉತ್ತರ ನೀಡಿದ್ದಾರೆ. ಅಲ್ಲದೇ ‘ಆಯಾ ಧರ್ಮದವರಿಗೆ ಪ್ರಾರ್ಥನೆ ಸಲ್ಲಿಸಲು ಮಂದಿರ, ಮಸೀದಿ, ಇಗರ್ಜ್‌, ಗುರುದ್ವಾರಗಳಿವೆ. ಹಬ್ಬಗಳನ್ನು ಸಾರ್ವಜನಿಕವಾಗಿ ಅಚರಿಸಲು ಅವಕಾಶ ಇದೆ. ಆದರೆ ಶಕ್ತಿ ಪ್ರದರ್ಶನ ಮಾಡಿ ಇತರ ಧರ್ಮದವರ ಭಾವನೆಗೆ ಧಕ್ಕೆ ತರುವಂತೆ ನಡೆದುಕೊಳ್ಳುವುದು ಸಾಧುವಲ್ಲ’ ಎಂದು ನುಡಿದಿದ್ದಾರೆ.

ಈ ವೇಳೆ ಮಧ್ಯ ಪ್ರವೇಶ ಮಾಡಿದ ಮುಖ್ಯಮಂತ್ರಿ ಖಟ್ಟರ್‌, ಯಾರಿಗೂ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಇಲ್ಲ. ಪ್ರಾರ್ಥನೆ ಸಲ್ಲಿಸಬೇಕಾದರೆ ಮಸೀದಿ, ಮಂದಿರ, ಚರ್ಚ್, ಗುರುದ್ವಾರಕ್ಕೆ ಹೋಗಲಿ. ಸಮಾಜದಲ್ಲಿ ಶಾಂತಿ ಕಾಪಾಡುವುದು ಹಾಗೂ ಸಮಾಜನ ಸ್ವಾಸ್ಥ ಕಾಪಾಡುವುದು ಪ್ರತಿಯೊಬ್ಬನ ಜವಾಬ್ದಾರಿ ಎಂದು ನುಡಿದರು.

ಅಲ್ಲದೇ ಈಗಾಗಲೇ ಶುಕ್ರವಾರದ ಪ್ರಾರ್ಥನೆಯನ್ನು ನಿರ್ದಿಷ್ಟ ಸ್ಥಳಗಳಲ್ಲಿ ನಿರ್ವಹಿಸುವುದಾಗಿ ಕೆಲವರು ಹೇಳಿದ್ದಾರೆ. ಒಂದು ವೇಳೆ ಅಲ್ಲಿ ಅವಕಾಶ ಇಲ್ಲದೇ ಇದ್ದರೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

‘ಕೆಲವರು ಸಾರ್ವಜನಿಕವಾಗಿ ಪ್ರಾರ್ಥನೆ ಮಾಡಿದರೆ, ಅಲ್ಲಿ ಎರಡೂ ಕಡೆಯವರ ನಡುವೆ ಮುಖಾಮುಖಿ ಉಂಟಾಗಬಹುದು. ಇಂಥ ಸ್ಥಳೀಯ ಸಮಸ್ಯೆಗಳು, ಕೋಮು ಸೌಹಾರ್ಧತೆಗೆ ಧಕ್ಕೆ ಉಂಟು ಮಾಡಬಾರದು. ದಸರಾ, ಉರೂಸ್, ರಾಮ್‌ ಲೀಲಾ ಮುಂತಾದ ಕಾರ್ಯಕ್ರಮಗಳನ್ನು, ಪೂರ್ವ ಅನುಮತಿ ಪಡೆದು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ಮಾಡಬಹುದಾಗಿದೆ’ ಎಂದು ಅವರು ಸ್ಪಷ್ಟ ಪಡಿಸಿದರು.

ದೈನಂದಿನ, ಸಾಪ್ತಾಹಿಕ ಪ್ರಾರ್ಥನೆಗಳು ಶ್ರದ್ಧಾ ಕೇಂದ್ರದಲ್ಲಿಯೇ ನಡೆಯಬೇಕು. ಸಾರ್ವಜನಿಕವಾಗಿ ಪ್ರಾರ್ಥನೆ ನಡೆಯುವಲ್ಲಿ ಇರುವ ತಕರಾರುಗಳನ್ನು ಸೌಹಾರ್ಧಯುತವಾಗಿ ಬಗೆ ಹರಿಸಿಕೊಳ್ಳಬೇಕು ಎಂದು ಅವರು ಹೇಳಿದರು.

 

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

5 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

7 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

7 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

8 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

8 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

8 hours ago