Featured

ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಮಾಡುವುದಕ್ಕೆ ನಿಷೇಧ ಹೇರಿದ ಹರ್ಯಾಣ ಸರ್ಕಾರ  – Vishwanews24

ಯಾವುದೇ ಧರ್ಮದವರಿಗೂ ಕೂಡ ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಇಲ್ಲ..

ಆಯಾ ಧರ್ಮದವರು ಪ್ರಾರ್ಥನೆ ಸಲ್ಲಿಸಲು ಅವರ ಧಾರ್ಮಿಕ ಕೇಂದ್ರಗಳಿಗೆ ಹೋಗಬೇಕು..

ಸಮಾಜದಲ್ಲಿ ಶಾಂತಿ ಕಾಪಾಡುವುದು ಹಾಗೂ ಸಮಾಜನ ಸ್ವಾಸ್ಥ ಕಾಪಾಡುವುದು ಪ್ರತಿಯೊಬ್ಬನ ಜವಾಬ್ದಾರಿ..

ಹರ್ಯಾಣ ಸಿಎಂ ಮನೋಹರ್‌ ಲಾಲ್ ಖಟ್ಟರ್‌ – VIshwanews24

ಚಂಡೀಗಢ: ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಮಾಡುವುದಕ್ಕೆ ಹರ್ಯಾಣ ಸರ್ಕಾರ ನಿಷೇಧ ಹೇರಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆ ನಡೆಸುವುದಕ್ಕೆ ಹಿಂದೂ ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಹರ್ಯಾಣದ ಬಿಜೆಪಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

ಈ ಬಗ್ಗೆ ವಿಧಾನಸಭೆಯಲ್ಲೇ ಘೋಷಣೆ ಮಾಡಿರುವ ಮುಖ್ಯಮಂತ್ರಿ ಮನೋಹರ್‌ ಲಾಲ್ ಖಟ್ಟರ್‌, ಯಾವುದೇ ಧರ್ಮದವರಿಗೂ ಕೂಡ ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ವಿಧಾನ ಸಭೆಯ ಕಲಾಪದಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕಾಂಗ್ರೆಸ್‌ ಸದಸ್ಯ ಅಫ್ತಾಬ್‌ ಅಹ್ಮದ್‌ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಈ ರೀತಿ ಉತ್ತರ ನೀಡಿದ್ದಾರೆ. ಅಲ್ಲದೇ ‘ಆಯಾ ಧರ್ಮದವರಿಗೆ ಪ್ರಾರ್ಥನೆ ಸಲ್ಲಿಸಲು ಮಂದಿರ, ಮಸೀದಿ, ಇಗರ್ಜ್‌, ಗುರುದ್ವಾರಗಳಿವೆ. ಹಬ್ಬಗಳನ್ನು ಸಾರ್ವಜನಿಕವಾಗಿ ಅಚರಿಸಲು ಅವಕಾಶ ಇದೆ. ಆದರೆ ಶಕ್ತಿ ಪ್ರದರ್ಶನ ಮಾಡಿ ಇತರ ಧರ್ಮದವರ ಭಾವನೆಗೆ ಧಕ್ಕೆ ತರುವಂತೆ ನಡೆದುಕೊಳ್ಳುವುದು ಸಾಧುವಲ್ಲ’ ಎಂದು ನುಡಿದಿದ್ದಾರೆ.

ಈ ವೇಳೆ ಮಧ್ಯ ಪ್ರವೇಶ ಮಾಡಿದ ಮುಖ್ಯಮಂತ್ರಿ ಖಟ್ಟರ್‌, ಯಾರಿಗೂ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಇಲ್ಲ. ಪ್ರಾರ್ಥನೆ ಸಲ್ಲಿಸಬೇಕಾದರೆ ಮಸೀದಿ, ಮಂದಿರ, ಚರ್ಚ್, ಗುರುದ್ವಾರಕ್ಕೆ ಹೋಗಲಿ. ಸಮಾಜದಲ್ಲಿ ಶಾಂತಿ ಕಾಪಾಡುವುದು ಹಾಗೂ ಸಮಾಜನ ಸ್ವಾಸ್ಥ ಕಾಪಾಡುವುದು ಪ್ರತಿಯೊಬ್ಬನ ಜವಾಬ್ದಾರಿ ಎಂದು ನುಡಿದರು.

ಅಲ್ಲದೇ ಈಗಾಗಲೇ ಶುಕ್ರವಾರದ ಪ್ರಾರ್ಥನೆಯನ್ನು ನಿರ್ದಿಷ್ಟ ಸ್ಥಳಗಳಲ್ಲಿ ನಿರ್ವಹಿಸುವುದಾಗಿ ಕೆಲವರು ಹೇಳಿದ್ದಾರೆ. ಒಂದು ವೇಳೆ ಅಲ್ಲಿ ಅವಕಾಶ ಇಲ್ಲದೇ ಇದ್ದರೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

‘ಕೆಲವರು ಸಾರ್ವಜನಿಕವಾಗಿ ಪ್ರಾರ್ಥನೆ ಮಾಡಿದರೆ, ಅಲ್ಲಿ ಎರಡೂ ಕಡೆಯವರ ನಡುವೆ ಮುಖಾಮುಖಿ ಉಂಟಾಗಬಹುದು. ಇಂಥ ಸ್ಥಳೀಯ ಸಮಸ್ಯೆಗಳು, ಕೋಮು ಸೌಹಾರ್ಧತೆಗೆ ಧಕ್ಕೆ ಉಂಟು ಮಾಡಬಾರದು. ದಸರಾ, ಉರೂಸ್, ರಾಮ್‌ ಲೀಲಾ ಮುಂತಾದ ಕಾರ್ಯಕ್ರಮಗಳನ್ನು, ಪೂರ್ವ ಅನುಮತಿ ಪಡೆದು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ಮಾಡಬಹುದಾಗಿದೆ’ ಎಂದು ಅವರು ಸ್ಪಷ್ಟ ಪಡಿಸಿದರು.

ದೈನಂದಿನ, ಸಾಪ್ತಾಹಿಕ ಪ್ರಾರ್ಥನೆಗಳು ಶ್ರದ್ಧಾ ಕೇಂದ್ರದಲ್ಲಿಯೇ ನಡೆಯಬೇಕು. ಸಾರ್ವಜನಿಕವಾಗಿ ಪ್ರಾರ್ಥನೆ ನಡೆಯುವಲ್ಲಿ ಇರುವ ತಕರಾರುಗಳನ್ನು ಸೌಹಾರ್ಧಯುತವಾಗಿ ಬಗೆ ಹರಿಸಿಕೊಳ್ಳಬೇಕು ಎಂದು ಅವರು ಹೇಳಿದರು.

 

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

6 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

7 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

7 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

10 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

10 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

11 hours ago