ಸಾರ್ವಜನಿಕ ಸ್ಥಳಗಳಲ್ಲಿ ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಆದೇಶ ; ಯಾವುದೇ ಸಂಘಟನೆಗಳನ್ನು ಗುರಿಯಾಗಿಸಿಲ್ಲ : ಸಿಎಂ ಸಿದ್ದರಾಮಯ್ಯ – vishwanews24
ಸಾರ್ವಜನಿಕ ಸ್ಥಳಗಳಲ್ಲಿ ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಆದೇಶ ..
ಯಾವುದೇ ಸಂಘಟನೆಗಳನ್ನು ಗುರಿಯಾಗಿಸಿಲ್ಲ : ಸಿಎಂ ಸಿದ್ದರಾಮಯ್ಯ
ಮೈಸೂರು:ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು ಹೊರಡಿಸಿದೆ.
ಮೂವರು ಆಟಗಾರರ ಹತ್ಯೆ : ಪಾಕ್ ವಿರುದ್ಧದ ಸರಣಿ ಬಹಿಷ್ಕರಿಸಿದ ಅಫ್ಘಾನಿಸ್ತಾನ್ – vishwanews24
ಬಿಜೆಪಿ ಸರ್ಕಾರ ಹೊರಡಿಸಿದ್ದ ಈ ಆದೇಶಕ್ಕೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಈ ಆದೇಶದಲ್ಲಿ ಸರ್ಕಾರ ಯಾವುದೇ ನಿಗಧಿತವಾದ ಸಂಘಸಂಸ್ಥೆಯನ್ನು ಗುರಿ ಮಾಡಿಲ್ಲ. ಬಿಜೆಪಿ ಜನರ ಹಿತಚಿಂತನೆ ಮಾಡುವುದನ್ನು ಬಿಟ್ಟು ರಾಜಕೀಯದಲ್ಲಿ ತೊಡಗಿದ್ದಾರೆ. ಈ ವಿಷಯದಲ್ಲಿ ಸಮಾಜದ ಶಾಂತಿಭಂಗವಾಗದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ.
