Featured

ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ – vishwanews24

ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ಹೊರಡಿಸಲಾಗಿದ್ದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ.

ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ವಿಭಾಗೀಯ ನ್ಯಾಯಪೀಠ, ಮಧ್ಯಂತರ ಆದೇಶ ತೆರವು ಕೋರಿ ಏಕಸದಸ್ಯ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ಸರಕಾರ ಮುಕ್ತ ಅವಕಾಶ ಹೊಂದಿದೆ ಎಂದು ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್‌ ಸೇರಿ ಯಾವುದೇ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ 2025ರ ಅಕ್ಟೋಬರ್ 18ರಂದು ಹೊರಡಿಸಿದ್ದ ಆದೇಶಕ್ಕೆ ತಡೆ ‌ನೀಡಿ ಧಾರವಾಡದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಅಕ್ಟೋಬರ್ 28ರಂದು ಮಧ್ಯಂತರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಕುರಿತು ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್‌.ಜಿ. ಪಂಡಿತ್‌ ಹಾಗೂ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಪ್ರಕಟಿಸಿತು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago