Featured

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ – vishwanews24

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.

21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ 2024 ಜಾರಿ ಮಾಡಿ ರಾಜ್ಯ ಸರ್ಕಾರ, ಗೆಜಟ್ ನೋಟಿಫಿಕೇಷನ್ ಹೊರಡಿಸಿದೆ.

ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು ಕರ್ನಾಟಕ ರಾಜ್ಯಕ್ಕೆ ಅನ್ವಯಿಸಿ ತಿದ್ದುಪಡಿ ಮಾಡಲಾಗಿದೆ. ಕೇಂದ್ರ ಅಧಿನಿಯಮಕ್ಕೆ ತಿದ್ದುಪಡಿ ತಂದಿರುವುದರಿಂದ ಈ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿ ಕೊಡಲಾಗಿತ್ತು.

ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ರಾಜ್ಯದಲ್ಲಿ 21 ವಯೋಮಿತಿ ಒಳಗಿನ ವ್ಯಕ್ತಿಗಳಿಗೆ ಸಿಗರೇಟು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಮಾರಾಟಕ್ಕೆ ಅನುಮತಿ ನೀಡುವಂತಿಲ್ಲ. ಪ್ರಸ್ತುತ ತಂಬಾಕು ಉತ್ಪನ್ನಗಳನ್ನು ಖರೀದಿಸುವುದಕ್ಕೆ ಕನಿಷ್ಠ ವಯೋಮಾನ 18 ಇದೆ. ಈಗ ಆ ವಯೋಮಾನವನ್ನು 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಲಾಗಿದೆ‌. ಯಾವುದೇ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನವನ್ನು ಬಳಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಮತ್ತು ತಂಬಾಕು ಉಗಿಯುವಂತಿಲ್ಲ. ಈ ತಿದ್ದುಪಡಿ ಕಾಯ್ದೆ ಪ್ರಕಾರ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಯಾರೇ ವ್ಯಕ್ತಿಯು ತಾನಾಗಿಯಾಗಲಿ ಅಥವಾ ಯಾರೇ ಇತರ ವ್ಯಕ್ತಿಯ ಪರವಾಗಿಯಾಗಲಿ ಉಪಹಾರ ಗೃಹ ಅಥವಾ ಪಬ್ ಅಥವಾ ಬಾರು ಅಥವಾ ರೆಸ್ಟೋರೆಂಟ್ ಒಳಗೊಂಡಂತೆ ಯಾವುದೇ ಸ್ಥಳದಲ್ಲಿ ಹುಕ್ಕಾ ಬಾರನ್ನು ತೆರೆಯುವಂತಿಲ್ಲ ಹಾಗೂ ನಡೆಸುವಂತಿಲ್ಲ.

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿ ನಿಯಮ‌ ಉಲ್ಲಂಘಿಸಿದವರಿಗೆ ದಂಡದ ಪ್ರಮಾಣವನ್ನು 200 ರೂ.ದಿಂದ 1,000 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು ಹುಕ್ಕಾ ಬಾರ್ ನಡೆಸಿ ನಿಯಮ ಉಲ್ಲಂಘಿಸುವವರಿಗೆ 1 ವರ್ಷದಿಂದ 3 ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿದಿಂದ 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago