Featured

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ – vishwanews24

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.

21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ 2024 ಜಾರಿ ಮಾಡಿ ರಾಜ್ಯ ಸರ್ಕಾರ, ಗೆಜಟ್ ನೋಟಿಫಿಕೇಷನ್ ಹೊರಡಿಸಿದೆ.

ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು ಕರ್ನಾಟಕ ರಾಜ್ಯಕ್ಕೆ ಅನ್ವಯಿಸಿ ತಿದ್ದುಪಡಿ ಮಾಡಲಾಗಿದೆ. ಕೇಂದ್ರ ಅಧಿನಿಯಮಕ್ಕೆ ತಿದ್ದುಪಡಿ ತಂದಿರುವುದರಿಂದ ಈ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿ ಕೊಡಲಾಗಿತ್ತು.

ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ರಾಜ್ಯದಲ್ಲಿ 21 ವಯೋಮಿತಿ ಒಳಗಿನ ವ್ಯಕ್ತಿಗಳಿಗೆ ಸಿಗರೇಟು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಮಾರಾಟಕ್ಕೆ ಅನುಮತಿ ನೀಡುವಂತಿಲ್ಲ. ಪ್ರಸ್ತುತ ತಂಬಾಕು ಉತ್ಪನ್ನಗಳನ್ನು ಖರೀದಿಸುವುದಕ್ಕೆ ಕನಿಷ್ಠ ವಯೋಮಾನ 18 ಇದೆ. ಈಗ ಆ ವಯೋಮಾನವನ್ನು 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಲಾಗಿದೆ‌. ಯಾವುದೇ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನವನ್ನು ಬಳಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಮತ್ತು ತಂಬಾಕು ಉಗಿಯುವಂತಿಲ್ಲ. ಈ ತಿದ್ದುಪಡಿ ಕಾಯ್ದೆ ಪ್ರಕಾರ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಯಾರೇ ವ್ಯಕ್ತಿಯು ತಾನಾಗಿಯಾಗಲಿ ಅಥವಾ ಯಾರೇ ಇತರ ವ್ಯಕ್ತಿಯ ಪರವಾಗಿಯಾಗಲಿ ಉಪಹಾರ ಗೃಹ ಅಥವಾ ಪಬ್ ಅಥವಾ ಬಾರು ಅಥವಾ ರೆಸ್ಟೋರೆಂಟ್ ಒಳಗೊಂಡಂತೆ ಯಾವುದೇ ಸ್ಥಳದಲ್ಲಿ ಹುಕ್ಕಾ ಬಾರನ್ನು ತೆರೆಯುವಂತಿಲ್ಲ ಹಾಗೂ ನಡೆಸುವಂತಿಲ್ಲ.

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿ ನಿಯಮ‌ ಉಲ್ಲಂಘಿಸಿದವರಿಗೆ ದಂಡದ ಪ್ರಮಾಣವನ್ನು 200 ರೂ.ದಿಂದ 1,000 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು ಹುಕ್ಕಾ ಬಾರ್ ನಡೆಸಿ ನಿಯಮ ಉಲ್ಲಂಘಿಸುವವರಿಗೆ 1 ವರ್ಷದಿಂದ 3 ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿದಿಂದ 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago