Featured

ಸಾಲಗಾರರ ಕಾಟ : ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ಆತ್ಮಹತ್ಯೆಗೆ ಶರಣಾದ ತಾಯಿ  – Vishwanews24

ಸಾಲಗಾರರ ಕಾಟ : ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ಆತ್ಮಹತ್ಯೆಗೆ ಶರಣಾದ ತಾಯಿ

ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ  ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ  ಮೂರನೇ ಹಂತದಲ್ಲಿ ನಡೆದಿದೆ.

ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್‌ ಮತ್ತು ನಿಶ್ಚಿತ್‌ ಮೃತಪಟ್ಟಿದ್ದಾರೆ. ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್‌ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸುಕನ್ಯಾ ಪತಿ ಜಯಾನಂದ್‌ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್‌ನಿಂದ  ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್‌ ಫ್ಯಾಕ್ಟರಿ ಬಂದ್‌ ಮಾಡಿದ್ದರು. ಜಯಾನಂದ್‌ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್‌ ಹೇಳಿಕೊಡುತ್ತಿದ್ದರು.

ವ್ಯವಹಾರ  ನಷ್ಟವಾಗಿದ್ದರಿಂದ ಜಯಾನಂದ್‌ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.\

ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದೆ.

Vishwa News 24

Recent Posts

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

8 seconds ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

8 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

27 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

3 hours ago