ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ನಡೆದಿದೆ.
ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್ ಮತ್ತು ನಿಶ್ಚಿತ್ ಮೃತಪಟ್ಟಿದ್ದಾರೆ. ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುಕನ್ಯಾ ಪತಿ ಜಯಾನಂದ್ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್ನಿಂದ ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್ ಫ್ಯಾಕ್ಟರಿ ಬಂದ್ ಮಾಡಿದ್ದರು. ಜಯಾನಂದ್ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದರು.
ವ್ಯವಹಾರ ನಷ್ಟವಾಗಿದ್ದರಿಂದ ಜಯಾನಂದ್ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.\
ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…