ಸಾಲಿಗ್ರಾಮ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಆರ್ಥಿಕ ನೆರವಿನೊಂದಿಗೆ ಹೊಸ ಮೀನು ಮಾರುಕಟ್ಟೆ ಉದ್ಘಾಟನೆ -Vishwanews24

Featured, ಉಡುಪಿ

ಸಾಲಿಗ್ರಾಮ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಆರ್ಥಿಕ ನೆರವಿನೊಂದಿಗೆ ಹೊಸ ಮೀನು ಮಾರುಕಟ್ಟೆ ಉದ್ಘಾಟನೆ -Vishwanews24

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ನಿರ್ಮಾಣದಿಂದಾಗಿ ಸಾಲಿಗ್ರಾಮದ ಹಳೆ ಮೀನು ಮಾರುಕಟ್ಟೆ ತೆರವಾಗಿದ್ದು, ಪಕ್ಕದಲ್ಲೇ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮತ್ತು ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನೆರವಿನೊಂದಿಗೆ ಹೊಸ ಮಾರುಕಟ್ಟೆ ನಿರ್ಮಿಸಲಾಗಿದ್ದು, ಉದ್ಘಾಟನೆ ಇಂದು ಜರುಗಿತು.

5.30 ಲಕ್ಷ ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಾಣವಾಗಿದ್ದು, ತುರ್ತಾಗಿ ಮಾರುಕಟ್ಟೆ ನಿರ್ಮಿಸಬೇಕಾದ ಅಗತ್ಯವಿದ್ದರಿಂದ ಹಾಗೂ ಸರಕಾರದ ಅನುದಾನಕ್ಕೆ ಕಾಯುವಷ್ಟು ಕಾಲಾವಕಾಶ ಇಲ್ಲವಾದ್ದರಿಂದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು 2.30 ಲಕ್ಷ ರೂ. ಸ್ವಂತ ಹಣವನ್ನು ಮಾರುಕಟ್ಟೆ ನಿರ್ಮಾಣಕ್ಕೆ ನೀಡಿದ್ದರು. ಹಾಗೂ 3 ಲಕ್ಷ ರೂ. ಪಟ್ಟಣ ಪಂಚಾಯಿತಿ ಅನುದಾನ ವಿನಿಯೋಗಿಸಿ ನಿರ್ಮಿಸಲಾಗಿತ್ತು.

ಮೀನು ಮಾರುಕಟ್ಟೆ ಪಕ್ಕದಲ್ಲೇ ರಿಕ್ಷಾ ತಂಗುದಾಣವನ್ನೂ ಕೂಡ ಶಾಸಕರು ತನ್ನ ಹಣದಲ್ಲೇ ನಿರ್ಮಿಸಿ ಕೊಟ್ಟಿದ್ದಾರೆ.

ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಉಪಾಧ್ಯಕ್ಷೆ ಅನಸೂಯ ಹೇರ್ಳೆ, ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವ ದೇವಾಡಿಗ, ಮುಖ್ಯಾಧಿಕಾರಿ ಅರುಣ್ ಕುಮಾರ್, ಪ.ಪಂ. ಸದಸ್ಯರಾದ ಕಾರ್ಕಡ ರಾಜು ಪೂಜಾರಿ, ರತ್ನಾ ನಾಗರಾಜ್ ಗಾಣಿಗ, ಭಾಸ್ಕರ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.