ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ನಿರ್ಮಾಣದಿಂದಾಗಿ ಸಾಲಿಗ್ರಾಮದ ಹಳೆ ಮೀನು ಮಾರುಕಟ್ಟೆ ತೆರವಾಗಿದ್ದು, ಪಕ್ಕದಲ್ಲೇ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮತ್ತು ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನೆರವಿನೊಂದಿಗೆ ಹೊಸ ಮಾರುಕಟ್ಟೆ ನಿರ್ಮಿಸಲಾಗಿದ್ದು, ಉದ್ಘಾಟನೆ ಇಂದು ಜರುಗಿತು.
5.30 ಲಕ್ಷ ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಾಣವಾಗಿದ್ದು, ತುರ್ತಾಗಿ ಮಾರುಕಟ್ಟೆ ನಿರ್ಮಿಸಬೇಕಾದ ಅಗತ್ಯವಿದ್ದರಿಂದ ಹಾಗೂ ಸರಕಾರದ ಅನುದಾನಕ್ಕೆ ಕಾಯುವಷ್ಟು ಕಾಲಾವಕಾಶ ಇಲ್ಲವಾದ್ದರಿಂದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು 2.30 ಲಕ್ಷ ರೂ. ಸ್ವಂತ ಹಣವನ್ನು ಮಾರುಕಟ್ಟೆ ನಿರ್ಮಾಣಕ್ಕೆ ನೀಡಿದ್ದರು. ಹಾಗೂ 3 ಲಕ್ಷ ರೂ. ಪಟ್ಟಣ ಪಂಚಾಯಿತಿ ಅನುದಾನ ವಿನಿಯೋಗಿಸಿ ನಿರ್ಮಿಸಲಾಗಿತ್ತು.
ಮೀನು ಮಾರುಕಟ್ಟೆ ಪಕ್ಕದಲ್ಲೇ ರಿಕ್ಷಾ ತಂಗುದಾಣವನ್ನೂ ಕೂಡ ಶಾಸಕರು ತನ್ನ ಹಣದಲ್ಲೇ ನಿರ್ಮಿಸಿ ಕೊಟ್ಟಿದ್ದಾರೆ.
ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಉಪಾಧ್ಯಕ್ಷೆ ಅನಸೂಯ ಹೇರ್ಳೆ, ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವ ದೇವಾಡಿಗ, ಮುಖ್ಯಾಧಿಕಾರಿ ಅರುಣ್ ಕುಮಾರ್, ಪ.ಪಂ. ಸದಸ್ಯರಾದ ಕಾರ್ಕಡ ರಾಜು ಪೂಜಾರಿ, ರತ್ನಾ ನಾಗರಾಜ್ ಗಾಣಿಗ, ಭಾಸ್ಕರ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…