ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ನಿರ್ಮಾಣದಿಂದಾಗಿ ಸಾಲಿಗ್ರಾಮದ ಹಳೆ ಮೀನು ಮಾರುಕಟ್ಟೆ ತೆರವಾಗಿದ್ದು, ಪಕ್ಕದಲ್ಲೇ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮತ್ತು ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನೆರವಿನೊಂದಿಗೆ ಹೊಸ ಮಾರುಕಟ್ಟೆ ನಿರ್ಮಿಸಲಾಗಿದ್ದು, ಉದ್ಘಾಟನೆ ಇಂದು ಜರುಗಿತು.
5.30 ಲಕ್ಷ ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಾಣವಾಗಿದ್ದು, ತುರ್ತಾಗಿ ಮಾರುಕಟ್ಟೆ ನಿರ್ಮಿಸಬೇಕಾದ ಅಗತ್ಯವಿದ್ದರಿಂದ ಹಾಗೂ ಸರಕಾರದ ಅನುದಾನಕ್ಕೆ ಕಾಯುವಷ್ಟು ಕಾಲಾವಕಾಶ ಇಲ್ಲವಾದ್ದರಿಂದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು 2.30 ಲಕ್ಷ ರೂ. ಸ್ವಂತ ಹಣವನ್ನು ಮಾರುಕಟ್ಟೆ ನಿರ್ಮಾಣಕ್ಕೆ ನೀಡಿದ್ದರು. ಹಾಗೂ 3 ಲಕ್ಷ ರೂ. ಪಟ್ಟಣ ಪಂಚಾಯಿತಿ ಅನುದಾನ ವಿನಿಯೋಗಿಸಿ ನಿರ್ಮಿಸಲಾಗಿತ್ತು.
ಮೀನು ಮಾರುಕಟ್ಟೆ ಪಕ್ಕದಲ್ಲೇ ರಿಕ್ಷಾ ತಂಗುದಾಣವನ್ನೂ ಕೂಡ ಶಾಸಕರು ತನ್ನ ಹಣದಲ್ಲೇ ನಿರ್ಮಿಸಿ ಕೊಟ್ಟಿದ್ದಾರೆ.
ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಉಪಾಧ್ಯಕ್ಷೆ ಅನಸೂಯ ಹೇರ್ಳೆ, ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವ ದೇವಾಡಿಗ, ಮುಖ್ಯಾಧಿಕಾರಿ ಅರುಣ್ ಕುಮಾರ್, ಪ.ಪಂ. ಸದಸ್ಯರಾದ ಕಾರ್ಕಡ ರಾಜು ಪೂಜಾರಿ, ರತ್ನಾ ನಾಗರಾಜ್ ಗಾಣಿಗ, ಭಾಸ್ಕರ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…