ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ನಿರ್ಮಾಣದಿಂದಾಗಿ ಸಾಲಿಗ್ರಾಮದ ಹಳೆ ಮೀನು ಮಾರುಕಟ್ಟೆ ತೆರವಾಗಿದ್ದು, ಪಕ್ಕದಲ್ಲೇ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮತ್ತು ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನೆರವಿನೊಂದಿಗೆ ಹೊಸ ಮಾರುಕಟ್ಟೆ ನಿರ್ಮಿಸಲಾಗಿದ್ದು, ಉದ್ಘಾಟನೆ ಇಂದು ಜರುಗಿತು.
5.30 ಲಕ್ಷ ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಾಣವಾಗಿದ್ದು, ತುರ್ತಾಗಿ ಮಾರುಕಟ್ಟೆ ನಿರ್ಮಿಸಬೇಕಾದ ಅಗತ್ಯವಿದ್ದರಿಂದ ಹಾಗೂ ಸರಕಾರದ ಅನುದಾನಕ್ಕೆ ಕಾಯುವಷ್ಟು ಕಾಲಾವಕಾಶ ಇಲ್ಲವಾದ್ದರಿಂದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು 2.30 ಲಕ್ಷ ರೂ. ಸ್ವಂತ ಹಣವನ್ನು ಮಾರುಕಟ್ಟೆ ನಿರ್ಮಾಣಕ್ಕೆ ನೀಡಿದ್ದರು. ಹಾಗೂ 3 ಲಕ್ಷ ರೂ. ಪಟ್ಟಣ ಪಂಚಾಯಿತಿ ಅನುದಾನ ವಿನಿಯೋಗಿಸಿ ನಿರ್ಮಿಸಲಾಗಿತ್ತು.
ಮೀನು ಮಾರುಕಟ್ಟೆ ಪಕ್ಕದಲ್ಲೇ ರಿಕ್ಷಾ ತಂಗುದಾಣವನ್ನೂ ಕೂಡ ಶಾಸಕರು ತನ್ನ ಹಣದಲ್ಲೇ ನಿರ್ಮಿಸಿ ಕೊಟ್ಟಿದ್ದಾರೆ.
ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಉಪಾಧ್ಯಕ್ಷೆ ಅನಸೂಯ ಹೇರ್ಳೆ, ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವ ದೇವಾಡಿಗ, ಮುಖ್ಯಾಧಿಕಾರಿ ಅರುಣ್ ಕುಮಾರ್, ಪ.ಪಂ. ಸದಸ್ಯರಾದ ಕಾರ್ಕಡ ರಾಜು ಪೂಜಾರಿ, ರತ್ನಾ ನಾಗರಾಜ್ ಗಾಣಿಗ, ಭಾಸ್ಕರ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…