ಕಿರುತೆರೆಯ ಖ್ಯಾತ ರಿಯಾಲಿಟಿ ಶೋ `ಸರಿಗಮಪ’ ಕಾರ್ಯಕ್ರಮದಲ್ಲಿ ತನ್ನ ಚೆಂದದ ಮಾತುಗಳಿಂದಲೇ ಕರ್ನಾಟಕದ ಸಾಕಷ್ಟು ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಪುಟಾಣಿ ಜ್ಞಾನ ಗುರುರಾಜ್ ಬೆಂಗಳೂರಿನ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಶನಲ್ ಫೌಂಡೇಶನ್ ವತಿಯಿಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಸಂಗೀತಲೋಕದಲ್ಲಿ ಗುರುತಿಸಿಕೊಂಡಿರುವ ಜ್ಞಾನ, ತಮ್ಮ ಸುಮಧುರ ಕಂಠದಿಂದಲೇ ಹಂಸಲೇಖ ಸೇರಿದಂತೆ ಹಲವಾರು ಗಣ್ಯರ ಸಾರಥ್ಯದಲ್ಲಿ ಮುಂದುವರಿಯುತ್ತಿದ್ದು, ಇದೀಗ ಇಂದು ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯುವ ಸಾಲು ಮರದ ತಿಮ್ಮಕ್ಕ ಅಭಿನಂದನಾ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಗೌರವಾರ್ಪಣೆ ಪಡೆಯಲಿದ್ದಾರೆ.
ಇನ್ನು ಈ ಪ್ರಶಸ್ತಿಯು ತಲಾ 25 ಸಾವಿರ ರೂ ನಗದು, ಬೆಳ್ಳಿಪದಕ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಜ್ಞಾನ ತಾಯಿ ರೇಖಾ ಅವರು ಕಡಬದ ಕೊಂಬಾರು ಗ್ರಾಮದ ಕಟ್ಟೆ ಇಡ್ಯಡ್ಕದವರಾಗಿದ್ದು, ಬೆಂಗಳೂರಿನ ರಾಮನಗರ ಹನುಮಾನ ಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಂಗೀತ ಶಿಕ್ಷಕಿಯಾಗಿದ್ದಾರೆ. ಜ್ಞಾನ ತಂದೆ ಗುರುರಾಜ್ ಬೆಂಗಳೂರಿನಲ್ಲಿ ಸಂಗೀತ ಗುರುಗಳಾಗಿದ್ದಾರೆ. ಜ್ಞಾನ ನೂರಾರು ವೇದಿಕೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ, ಟಿ.ವಿ. ಶೋಗಳಲ್ಲಿ ಭಾಗವಹಿಸಿ ಖ್ಯಾತ ನಟರಿಂದ, ಸಂಗೀತ ಮಾಂತ್ರಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಾರ್ಯಕ್ರಮದಲ್ಲಿ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಗೈದ ಹಲವಾರಿಗೆ ಪ್ರಶಸ್ತಿ ಪ್ರಧಾನವು ನಡೆಯಲಿದೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…