Featured

ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಪ್ರಶಸ್ತಿ ಪಡೆಯಲಿದ್ದಾರೆ ಸರಿಗಮಪ ಖ್ಯಾತಿಯ ಪುಟಾಣಿ ಜ್ಞಾನ – Vishwanews24

ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಪ್ರಶಸ್ತಿ ಪಡೆಯಲಿದ್ದಾರೆ ಸರಿಗಮಪ ಖ್ಯಾತಿಯ ಪುಟಾಣಿ ಜ್ಞಾನ

ಕಿರುತೆರೆಯ ಖ್ಯಾತ ರಿಯಾಲಿಟಿ ಶೋ `ಸರಿಗಮಪ’ ಕಾರ್ಯಕ್ರಮದಲ್ಲಿ ತನ್ನ ಚೆಂದದ ಮಾತುಗಳಿಂದಲೇ ಕರ್ನಾಟಕದ ಸಾಕಷ್ಟು ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಪುಟಾಣಿ ಜ್ಞಾನ ಗುರುರಾಜ್ ಬೆಂಗಳೂರಿನ ಸಾಲುಮರದ ತಿಮ್ಮಕ್ಕ ಇಂಟರ್‌ನ್ಯಾಶನಲ್ ಫೌಂಡೇಶನ್ ವತಿಯಿಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಚಿಕ್ಕ ವಯಸ್ಸಿನಲ್ಲಿಯೇ ಸಂಗೀತಲೋಕದಲ್ಲಿ ಗುರುತಿಸಿಕೊಂಡಿರುವ ಜ್ಞಾನ, ತಮ್ಮ ಸುಮಧುರ ಕಂಠದಿಂದಲೇ ಹಂಸಲೇಖ ಸೇರಿದಂತೆ ಹಲವಾರು ಗಣ್ಯರ ಸಾರಥ್ಯದಲ್ಲಿ ಮುಂದುವರಿಯುತ್ತಿದ್ದು, ಇದೀಗ ಇಂದು ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯುವ ಸಾಲು ಮರದ ತಿಮ್ಮಕ್ಕ ಅಭಿನಂದನಾ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಗೌರವಾರ್ಪಣೆ ಪಡೆಯಲಿದ್ದಾರೆ.

ಇನ್ನು ಈ ಪ್ರಶಸ್ತಿಯು ತಲಾ 25 ಸಾವಿರ ರೂ ನಗದು, ಬೆಳ್ಳಿಪದಕ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಜ್ಞಾನ ತಾಯಿ ರೇಖಾ ಅವರು ಕಡಬದ ಕೊಂಬಾರು ಗ್ರಾಮದ ಕಟ್ಟೆ ಇಡ್ಯಡ್ಕದವರಾಗಿದ್ದು, ಬೆಂಗಳೂರಿನ ರಾಮನಗರ ಹನುಮಾನ ಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಂಗೀತ ಶಿಕ್ಷಕಿಯಾಗಿದ್ದಾರೆ. ಜ್ಞಾನ ತಂದೆ ಗುರುರಾಜ್ ಬೆಂಗಳೂರಿನಲ್ಲಿ ಸಂಗೀತ ಗುರುಗಳಾಗಿದ್ದಾರೆ. ಜ್ಞಾನ ನೂರಾರು ವೇದಿಕೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ, ಟಿ.ವಿ. ಶೋಗಳಲ್ಲಿ ಭಾಗವಹಿಸಿ ಖ್ಯಾತ ನಟರಿಂದ, ಸಂಗೀತ ಮಾಂತ್ರಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಾರ್ಯಕ್ರಮದಲ್ಲಿ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಗೈದ ಹಲವಾರಿಗೆ ಪ್ರಶಸ್ತಿ ಪ್ರಧಾನವು ನಡೆಯಲಿದೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

17 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago