ಚಿಕ್ಕಮಗಳೂರು : ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ.
ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಮೃತ ಮಹಿಳೆ ಎನ್ನಲಾಗಿದೆ. ಅರ್ಪಿತಾ ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡದ ಕಾರಣದಿಂದ ಸಂಘದ ಸದಸ್ಯರು ಶುಕ್ರವಾರ ಬೆಳಗ್ಗೆ ಅರ್ಪಿತಾ ಮನೆಗೆ ತೆರಳಿ ಸಾಲದ ವಿಚಾರವಾಗಿ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಎರಡೂ ಕಡೆಯವರಿಂದ ವಾಗ್ವಾದ ನಡೆದಿದ್ದು, ಈ ವೇಳೆ ಸಂಘದವರು, ಸಾಲ ಕಟ್ಟಲಾಗದಿದ್ದರೆ, ಎಲ್ಲಾದರು ಹೋಗಿ ಸಾಯಿ ಎಂದು ನಿಂದಿಸಿದ್ದಾರೆ ಎನ್ನಲಾಗಿದ್ದು, ಅರ್ಪಿತಾ ಮೇಲೆ ಹಲ್ಲೆಯನ್ನೂ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಹಲ್ಲೆ, ನಿಂದನೆಯಿಂದ ಮನನೊಂದ ಅರ್ಪಿತಾ ಮನೆಯಲ್ಲಿ ತನ್ನ ಮಗುವಿನೊಂದಿಗೆ ಒಬ್ಬರೇ ಇದ್ದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…