ಚಿಕ್ಕಮಗಳೂರು : ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ.
ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಮೃತ ಮಹಿಳೆ ಎನ್ನಲಾಗಿದೆ. ಅರ್ಪಿತಾ ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡದ ಕಾರಣದಿಂದ ಸಂಘದ ಸದಸ್ಯರು ಶುಕ್ರವಾರ ಬೆಳಗ್ಗೆ ಅರ್ಪಿತಾ ಮನೆಗೆ ತೆರಳಿ ಸಾಲದ ವಿಚಾರವಾಗಿ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಎರಡೂ ಕಡೆಯವರಿಂದ ವಾಗ್ವಾದ ನಡೆದಿದ್ದು, ಈ ವೇಳೆ ಸಂಘದವರು, ಸಾಲ ಕಟ್ಟಲಾಗದಿದ್ದರೆ, ಎಲ್ಲಾದರು ಹೋಗಿ ಸಾಯಿ ಎಂದು ನಿಂದಿಸಿದ್ದಾರೆ ಎನ್ನಲಾಗಿದ್ದು, ಅರ್ಪಿತಾ ಮೇಲೆ ಹಲ್ಲೆಯನ್ನೂ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಹಲ್ಲೆ, ನಿಂದನೆಯಿಂದ ಮನನೊಂದ ಅರ್ಪಿತಾ ಮನೆಯಲ್ಲಿ ತನ್ನ ಮಗುವಿನೊಂದಿಗೆ ಒಬ್ಬರೇ ಇದ್ದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…