ಬೆಳಗಾವಿ: ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಕರ ಬರಕ್ಕೆ ಬೆಳೆ ಕೈಕೊಟ್ಟಿದ್ದು ಜೀವನ ನಡೆಸಲು ಸಾಲ ಮಾಡಿದ್ದರು.
ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಸಾಲ ನೀಡಿದ್ದ ಮಹಿಳೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ ಮಾಡಿದ್ದಾಳೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜು ಖೋತಗಿ ಎಂಬ ರೈತ ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ನೀಡುತ್ತಿದ್ದರು.
ಎರಡು ದಿನಗಳ ಹಿಂದೆ ಸಿದ್ದವ್ವ ಏಕಾಏಕಿ ರಾಜು ಅವರನ್ನು ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ತಾಕೀತು ಮಾಡಿದ್ದಾರೆ. ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದಕ್ಕೆ ಇದಕ್ಕೆ ಒಪ್ಪದ ಮಹಿಳೆಯು ರೈತ, ಪತ್ನಿ ಹಾಗೂ ಪುತ್ರನನ್ನು ಗೃಹ ಬಂದನದಲ್ಲಿಟ್ಟಿದ್ದಳು. ಒಂದು ದಿನದ ಬಳಿಕ ರಾಜುನನ್ನು ಬಿಡುಗಡೆ ಮಾಡಿ, ಮಗ ಮತ್ತು ಪತ್ನಿಯನ್ನು ಗೃಹಬಂಧನದಲ್ಲಿಟ್ಟಳು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…