ಚಿತ್ರದುರ್ಗ,: “ದೇಶಕ್ಕೆ ಸ್ವಾತಂತ್ರ್ಯ ದೊರೆತು 72 ವರ್ಷಗಳು ಕಳೆದಿವೆ. ಎಚ್.ಎಸ್.ದೊರೆಸ್ವಾಮಿ ಯಾವ ವಯಸ್ಸಿನಲ್ಲಿ ಹೋರಾಟ ಮಾಡಿದ್ದರು ಎಂಬುದು ಗೊತ್ತಿಲ್ಲ. ಸಾವರ್ಕರ್ ಅವರಷ್ಟು ಲಾಠಿ ಏಟನ್ನು ದೊರೆಸ್ವಾಮಿ ತಿಂದಿದ್ದಾರಾ?” ಎಂದು ಯತ್ನಾಳ ಪ್ರಶ್ನಿಸಿದ್ದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ವಿರುದ್ಧ ಮತ್ತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
“ದೊರೆಸ್ವಾಮಿ ಆನೆ ಇದ್ದಂತೆ. ಆನೆ ನಡೆಯುವಾಗ ನಾಯಿ ಬೊಗಳಿದರೆ ಏನೂ ಆಗದು” ಎಂಬ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಯತ್ನಾಳ, “ಅವರು ಆನೆಯೊ, ಹಂದಿಯೊ ತಿಳಿಯದು” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶುಕ್ರವಾರ ಹೇಳಿದ್ದಾರೆ.
“ದೊರೆಸ್ವಾಮಿ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವಾಗ ಎಚ್.ಡಿ.ಕುಮಾರಸ್ವಾಮಿ ಹುಟ್ಟಿರಲಿಲ್ಲ. ಕುಮಾರಸ್ವಾಮಿ ರಾಜಕೀಯಕ್ಕೆ ಏಕೆ ಬಂದರು ಹಾಗೂ ಸಾವಿರಾರು ಕೋಟಿ ರೂಪಾಯಿ ಹಣ ಹೇಗೆ ಸಂಪಾದಿಸಿದರು ಎಂಬುದು ಗೊತ್ತಿದೆ.ಕುಮಾರಸ್ವಾಮಿಗೆ ನನ್ನ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ” ಎಂದು ಆಕ್ರೋಶಗೊಂಡಿದ್ದಾರೆ.
“ನನ್ನ ವಿರುದ್ಧ 23 ಪ್ರಕರಣಗಳಿವೆ. ನೀರಾವರಿ ಯೋಜನೆಗೆ ನಡೆದ ಹೋರಾಟ, ಪ್ರಧಾನಿ ನರೇಂದ್ರ ಮೋದಿ ಪರವಾಗಿ ಧ್ವನಿ ಎತ್ತಿದ ಪರಿಣಾಮವಾಗಿ ಈ ಪ್ರಕರಣಗಳು ದಾಖಲಾಗಿವೆ. ನನ್ನ ಮೇಲೆ ಅತ್ಯಾಚಾರ, ಭೂ ಕಬಳಿಕೆ ಹಾಗೂ ನಕಲಿ ನೋಟು ದಂಧೆಯ ಪ್ರಕರಣಗಳು ಇಲ್ಲ. ಕಾಂಗ್ರೆಸ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದೆ ಮೊದಲು ಅವರು ಕ್ಷಮೆ ಕೇಳಲಿ. ಸದನಕ್ಕೆ ಬನ್ನಿ ನಾನೂ ಉತ್ತರ ಕೊಡುತ್ತೇನೆ” ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.
₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!…
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…