Featured

ಸಾವರ್ಕರ್ ಬರುತ್ತಿದ್ದಾರೆ ಉಡುಪಿಗೆ : ಕೂರ್ಮ ಬಳಗದ ವತಿಯಿಂದ ವೀರ ಸಾವರ್ಕರ್ ಕುರಿತಾಗಿ ವಿಚಾರಗೋಷ್ಠಿ- Vishwanews24

ಸಾವರ್ಕರ್ ಬರುತ್ತಿದ್ದಾರೆ ಉಡುಪಿಗೆ : ಕೂರ್ಮ ಬಳಗದ ವತಿಯಿಂದ ವೀರ ಸಾವರ್ಕರ್ ಕುರಿತಾಗಿ ವಿಚಾರಗೋಷ್ಠಿ- Vishwanews24

ಉಡುಪಿ: ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಪ್ರಯುಕ್ತ ಕೂರ್ಮಾ ಬಳಗದ ವತಿಯಿಂದ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಸಾಹಿತ್ಯಗಳ ಕುರಿತಾಗಿ ವಿಚಾರಗೋಷ್ಠಿ ಜನವರಿ 12 ರಂದು ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಸಂಚಾಲಕರಾದ ಶ್ರೀಕಾಂತ್‌ ಶೆಟ್ಟಿ ಹೇಳಿದರು.

ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಷ್ಟ್ರೀಯ ವಿಚಾರಧಾರೆಗೆ ಪೂರಕವಾದ ಸಾಹಿತ್ಯ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕುರ್ಮಾ ಬಳಗ ವಿಚಾರಗೋಷ್ಠಿಗಳನ್ನು ಆಯೋಜಿಸುತ್ತಾ ಬಂದಿರುತ್ತದೆ. Cultural unity recreation and motivational affiliates ಎನ್ನುವುದು ಈ ಹೆಸರಿನ ಹೂರಣವಾಗಿದೆ.

ಸಾಂಸ್ಕೃತಿಕ ವಿಭಿನ್ನತೆಯಿಂದ ವಿಶ್ವದ ಗಮನ ಸೆಳೆದಿರುವ ಭಾರತ, ಸ್ವಾತಂತ್ರ್ಯ ಪಡೆದ ಬಳಿಕ ನಮ್ಮ ನವ ನಾಯಕರ ಪ್ರಮಾದಗಳಿಂದಾಗಿ ಪಾಶ್ಚಾತ್ಯ ನೀತಿಗಳನ್ನೇ ಎರವಲು ಪಡೆದುಕೊಂಡು, ವಸಾಹತುಶಾಹಿಗಳು ಹಾಕಿದ ಅಡಿಗಲ್ಲಿನ ಮೇಲೆ ಕೃತಕವಾಗಿ ಕಟ್ಟಲ್ಪಟ್ಟಿದೆ. ಈ ದೇಶದ ನಿಜವಾದ ಅಂತಸತ್ವವಾಗಿರುವ ಸಾಂಸ್ಕೃತಿಕ ರಾಷ್ಟ್ರೀಯತೆಯನ್ನು ಮರು ಸ್ಥಾಪಿಸಿದರೆ ದೇಶ ಈಗ ಎದುರಿಸುತ್ತಿರುವ ಅನೇಕ ಸವಾಲುಗಳಿಗೆ ಪರಿಹಾರ ಲಭ್ಯವಿದೆ. ಈ ಹಿನ್ನೆಲೆಯಲ್ಲಿ ಶ್ರೀ ಅರವಿಂದೋ ವಿವೇಕಾನಂದ ಮತ್ತು ಸಾವರ್ಕರ್ ಅವರು ಪ್ರತಿಪಾದಿಸಿದ ರಾಷ್ಟ್ರೀಯತೆಯ ಪರಿಕಲ್ಪನೆಯ ಬಗ್ಗೆ ಚಿಂತನ ಮಂಥನ ನಡೆಯಬೇಕಿದೆ.

ದಿನಾಂಕ 12 ಜನವರಿ ಬುಧವಾರದಂದು ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಆ ಪ್ರಯುಕ್ತ ಉಡುಪಿಯಲ್ಲಿ ನಮ್ಮ ಸಂಸ್ಥೆಯು ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಸಾಹಿತ್ಯಗಳ ಕುರಿತಾಗಿ ವಿಚಾರಗೋಷ್ಠಿ ಆಯೋಜಿಸಿದ್ದು, ಈ ಕಾರ್ಯಕ್ರಮವು ದಿನಾಂಕ 12 ಜನವರಿ 2022 3:00 ಗಂಟೆಗೆ ಸರಿಯಾಗಿ ಉಡುಪಿಯ ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೀರ ಸಾವರ್ಕರ್ ಅವರ ಮೊಮ್ಮಗ, ಮೃತ್ಯುಂಜಯ ಪ್ರಕಾಶನ ಇದರ ಮುಖ್ಯಸ್ಥರಾಗಿರುವ ಸಾತ್ಯಕಿ ಸಾವರ್ಕರ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮತ್ತು ಖ್ಯಾತ ಸಾಹಿತ್ಯ ವಿಮರ್ಶಕರಾಗಿರುವ ಸಂದೀಪ್ ಬಾಲಕೃಷ್ಣನ್ ಮೊದಲಾದವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾವರ್ಕರ್ ಅವರ ಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಜೊತೆಗೆ ಸಾವರ್ಕರವರ ಸಾಹಿತ್ಯಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂವೇದನಾ ಫೌಂಡೇಶನ್‌ ಉಡುಪಿ ಇದರ ಪ್ರಕಾಶ್‌ ಮಲ್ಪೆ, ಸೂರಜ್‌ ಕಿದಿಯೂರು ಶಶಿಕಾಂತ್‌ ಶೆಟ್ಟಿ ಉಪಸ್ಥೀತರಿದ್ದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

1 hour ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

5 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

7 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

8 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

9 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

9 hours ago