ಕೇರಳ: ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ 10 ತಿಂಗಳ ಮಗುವಿನ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಈ ಮೂಲಕ ಪುಟ್ಟ ಕಂದಮ್ಮ ಸಾವಿನಲ್ಲೂ ಐದು ಮಕ್ಕಳ ಬಾಳಿಗೆ ಬೆಳಕಾಗಿದ್ದಾಳೆ.
ತಮ್ಮ ಮಗಳು ಆಲಿನ್ ಶೆರಿನ್ ಅಬ್ರಹಾಂಳನ್ನು ಕಳೆದುಕೊಂಡ ತೀವ್ರ ದುಃಖದ ನಡುವೆಯೂ ಪೋಷಕರು ಆಕೆಯ ಪ್ರಮುಖ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾದರಿಯೆನಿಸಿದ್ದಾರೆ.
ಪಟ್ಟನಂತಿಟ್ಟು ಜಿಲ್ಲೆಯ ಮಲ್ಲಪ್ಪಳ್ಳಿಯ ಅರುಣ್ ಅಬ್ರಹಾಂ, ಪತ್ನಿ ಶೆರಿನ್, 10 ತಿಂಗಳ ಮಗಳು, ಹಾಗು ತಂದೆ ತಾಯಿ ಜೊತೆ ಫೆ. 5ರಂದು ಕೊಟ್ಟಾಯಂನಿಂದ ತಿರುವಲ್ಲಾಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅಂದು ಮಧ್ಯಾಹ್ನ 2.30ರ ಸುಮಾರಿಗೆ ಅರುಣ್ ಅವರು ಚಲಾಯಿಸುತ್ತಿದ್ದ ಕಾರು ಕೊಟ್ಟಾಯಂನ ಪಲ್ಲಂ ಬಳಿ ಇನ್ನೊಂದು ಕಾರಿಗೆ ಮುಖಾಮುಖಿ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮಗು ಆಲಿನ್ ಗಂಭೀರವಾಗಿ ಗಾಯಗೊಂಡಿತ್ತು.
ಇದನ್ನೂ ಓದಿ:
ತಕ್ಷಣವೇ ಮಗುವನ್ನು ಚಂಗನಶ್ಶೇರಿಯ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ನಂತರ ಹೆಚ್ಚಿನ ಚಿಕಿತ್ಸೆಗೆ ಚೆತಿಪುಳದಲ್ಲಿರುವ ಸೇಂಟ್ ಥಾಮಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ನಂತರ ಬಿಲೀವರ್ಸ್ ಚರ್ಚ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಗುವಿನ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗದ ಕಾರಣ, ಫೆ. 6ರಂದು ರಾತ್ರಿ ಕೊಚ್ಚಿನ್ನ ಅಮೃತ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಕಳೆದ ಒಂದು ವಾರದಿಂದ ತಜ್ಞ ವೈದ್ಯಕೀಯ ತಂಡ ನಿರಂತರವಾಗಿ ಮಗುವಿನ ಚೇತರಿಕೆಗಾಗಿ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದಾರೆ. ಮಗುವಿಗೆ ಪ್ರಜ್ಞೆ ಬಾರದ ಕಾರಣ, ನಂತರ ಮೆದುಳು ನಿಷ್ಕ್ರಿಯವಾಗಿದೆ ಎಂದು ಘೋಷಿಸಲಾಯಿತು.
ಅತೀವ ದುಃಖದ ನಡುವೆಯೇ ಮಗುವಿನ ತಂದೆ ಅರುಣ್ ಹಾಗೂ ತಾಯಿ ಶೆರಿನ್ ಅವರು ಆಕೆಯ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು. ಹಾಗಾಗಿ ಆಲಿನ್ ಪೋಷಕರ ಸಮ್ಮತಿಯ ಮೇರೆಗೆ ಮಗುವಿನ ಅಂಗಾಂಗಗಳನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ನೀಡಲಾಗಿದೆ. ಈ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ.
ಇದನ್ನೂ ಓದಿ:
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…