ಕೇರಳ: ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ 10 ತಿಂಗಳ ಮಗುವಿನ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಈ ಮೂಲಕ ಪುಟ್ಟ ಕಂದಮ್ಮ ಸಾವಿನಲ್ಲೂ ಐದು ಮಕ್ಕಳ ಬಾಳಿಗೆ ಬೆಳಕಾಗಿದ್ದಾಳೆ.
ತಮ್ಮ ಮಗಳು ಆಲಿನ್ ಶೆರಿನ್ ಅಬ್ರಹಾಂಳನ್ನು ಕಳೆದುಕೊಂಡ ತೀವ್ರ ದುಃಖದ ನಡುವೆಯೂ ಪೋಷಕರು ಆಕೆಯ ಪ್ರಮುಖ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾದರಿಯೆನಿಸಿದ್ದಾರೆ.
ಪಟ್ಟನಂತಿಟ್ಟು ಜಿಲ್ಲೆಯ ಮಲ್ಲಪ್ಪಳ್ಳಿಯ ಅರುಣ್ ಅಬ್ರಹಾಂ, ಪತ್ನಿ ಶೆರಿನ್, 10 ತಿಂಗಳ ಮಗಳು, ಹಾಗು ತಂದೆ ತಾಯಿ ಜೊತೆ ಫೆ. 5ರಂದು ಕೊಟ್ಟಾಯಂನಿಂದ ತಿರುವಲ್ಲಾಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅಂದು ಮಧ್ಯಾಹ್ನ 2.30ರ ಸುಮಾರಿಗೆ ಅರುಣ್ ಅವರು ಚಲಾಯಿಸುತ್ತಿದ್ದ ಕಾರು ಕೊಟ್ಟಾಯಂನ ಪಲ್ಲಂ ಬಳಿ ಇನ್ನೊಂದು ಕಾರಿಗೆ ಮುಖಾಮುಖಿ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮಗು ಆಲಿನ್ ಗಂಭೀರವಾಗಿ ಗಾಯಗೊಂಡಿತ್ತು.
ಇದನ್ನೂ ಓದಿ:
ತಕ್ಷಣವೇ ಮಗುವನ್ನು ಚಂಗನಶ್ಶೇರಿಯ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ನಂತರ ಹೆಚ್ಚಿನ ಚಿಕಿತ್ಸೆಗೆ ಚೆತಿಪುಳದಲ್ಲಿರುವ ಸೇಂಟ್ ಥಾಮಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ನಂತರ ಬಿಲೀವರ್ಸ್ ಚರ್ಚ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಗುವಿನ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗದ ಕಾರಣ, ಫೆ. 6ರಂದು ರಾತ್ರಿ ಕೊಚ್ಚಿನ್ನ ಅಮೃತ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಕಳೆದ ಒಂದು ವಾರದಿಂದ ತಜ್ಞ ವೈದ್ಯಕೀಯ ತಂಡ ನಿರಂತರವಾಗಿ ಮಗುವಿನ ಚೇತರಿಕೆಗಾಗಿ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದಾರೆ. ಮಗುವಿಗೆ ಪ್ರಜ್ಞೆ ಬಾರದ ಕಾರಣ, ನಂತರ ಮೆದುಳು ನಿಷ್ಕ್ರಿಯವಾಗಿದೆ ಎಂದು ಘೋಷಿಸಲಾಯಿತು.
ಅತೀವ ದುಃಖದ ನಡುವೆಯೇ ಮಗುವಿನ ತಂದೆ ಅರುಣ್ ಹಾಗೂ ತಾಯಿ ಶೆರಿನ್ ಅವರು ಆಕೆಯ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು. ಹಾಗಾಗಿ ಆಲಿನ್ ಪೋಷಕರ ಸಮ್ಮತಿಯ ಮೇರೆಗೆ ಮಗುವಿನ ಅಂಗಾಂಗಗಳನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ನೀಡಲಾಗಿದೆ. ಈ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ.
ಇದನ್ನೂ ಓದಿ:
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…