Featured

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ – vishwanews24

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ

ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ ಎಂಬ ಸಂದೇಶವನ್ನು ಬೆಳ್ತಂಗಡಿ ತಾಲೂಕಿನ ಆರ್ವ ನಿವಾಸಿಗಳಾದ ದಿವಂಗತ ಕಾರ್ಮಿನ್ ಪಿರೇರಾ (70) ಅವರ ಕುಟುಂಬ ತಮ್ಮ ಆದರ್ಶ ನಿರ್ಧಾರದ ಮೂಲಕ ಸಾಕಾರಗೊಳಿಸಿದೆ. ತಮ್ಮ ನಿಧನದ ಬಳಿಕ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ತಮ್ಮ ಮೃತದೇಹವನ್ನು ದಾನ ಮಾಡುವ ಮೂಲಕ ಕಾರ್ಮಿನ್ ಪಿರೇರಾ ಅವರು ಸಮಾಜಕ್ಕೆ ಮಾದರಿಯಾಗಿದ್ದಾರೆ.

ಇತ್ತೀಚೆಗೆ ನಿಧನರಾದ ಕಾರ್ಮಿನ್ ಪಿರೇರಾ ಅವರ ಮೃತದೇಹವನ್ನು ಅವರ ಕುಟುಂಬದವರು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜುಗೆ ದಾನವಾಗಿ ಹಸ್ತಾಂತರಿಸಿದರು. ಈ ಮಹತ್ವದ ನಿರ್ಧಾರದ ಹಿಂದಿನ ಪ್ರಮುಖ ಪ್ರೇರಕ ಶಕ್ತಿಯಾಗಿದ್ದು, ಮೃತರ ಪುತ್ರಿ ಹಾಗೂ ಶಿಕ್ಷಕಿ ಪ್ಲೇವಿ ಡಿಸೋಜಾ.

ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ), ಮಂಗಳೂರು ದಕ್ಷಿಣ ವಲಯದ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ, ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಆಯೋಜಿಸಿದ್ದ ದೇಹದಾನ ಜಾಗೃತಿ ಶಿಬಿರದಲ್ಲಿ ಭಾಗವಹಿಸಿ, ದೇಹದಾನದ ಮಹತ್ವವನ್ನು ಪ್ಲೇವಿ ಡಿಸೋಜಾ ಅರಿತುಕೊಂಡಿದ್ದರು. ಬಳಿಕ ಈ ವಿಷಯವನ್ನು ಕುಟುಂಬದವರೊಂದಿಗೆ ಚರ್ಚಿಸಿ, ವೈದ್ಯಕೀಯ ಶಿಕ್ಷಣಕ್ಕೆ ಮೃತದೇಹಗಳ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಕುಟುಂಬದವರು ಸಹಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಕಾರ್ಮಿನ್ ಪಿರೇರಾ ಅವರ ಅಂತ್ಯಸಂಸ್ಕಾರದ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ, ಅತ್ಯಂತ ಗೌರವದಿಂದ ಅವರ ಮೃತದೇಹವನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಹಸ್ತಾಂತರಿಸಿ ಅಂತಿಮ ಪ್ರಯಾಣವನ್ನು ಸಾರ್ಥಕಗೊಳಿಸಿದರು.

ಒಬ್ಬ ವ್ಯಕ್ತಿಯ ಮರಣದ ನಂತರ ಅವರ ದೇಹವು ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಧ್ಯಯನ ಮತ್ತು ಸಂಶೋಧನೆಗೆ ನೆರವಾಗುವುದು ಅತ್ಯುನ್ನತ ದಾನಗಳಲ್ಲಿ ಒಂದಾಗಿದೆ. ಈ ನಿಸ್ವಾರ್ಥ ಕಾರ್ಯದ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ ಕಾರ್ಮಿನ್ ಪಿರೇರಾ ಅವರ ಕುಟುಂಬದ ನಿರ್ಧಾರವನ್ನು ಸ್ಥಳೀಯರು ಹಾಗೂ ಸಾರ್ವಜನಿಕರು ಹೃತ್ಪೂರ್ವಕವಾಗಿ ಶ್ಲಾಘಿಸಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ – vishwanews24

ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…

30 minutes ago

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ – vishwanews24

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…

50 minutes ago

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…

1 hour ago

ಬೆಳ್ತಂಗಡಿ: ಹಾವು ಕಚ್ಚಿ ಬಾಲಕಿ ಗಂಭೀರ – vishwanews24

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…

1 hour ago

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…

2 hours ago

ಉಡುಪಿ:  ನೇರ ಸಂದರ್ಶನ – vishwanews24

ಉಡುಪಿ:  ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ  ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್…

2 hours ago