Featured

ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ : ಸರ್ಕಾರದ ವಿರುದ್ದ ಕುಮಾರಸ್ವಾಮಿ – Vishwanews24

ಕರಾವಳಿ ಕೆರಳಿದೆ.. ಕರ್ನಾಟಕ ಕೆರಳುವುದು ಬಾಕಿ ಇದೆ..

ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ

ಬೆಂಗಳೂರು: ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ. ಕರಾವಳಿ ಕೆರಳಿದೆ. ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವಿಟ್ ಮಾಡಿದ ಅವರು, ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ.ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ. ಸರಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರಕಾರದ ವರ್ಷದ ಸಾಧನೆ ಎಂದು ಲೇವಡಿ ಮಾಡಿದ್ದಾರೆ.

ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ʼಮತಕ್ಕಾಗಿ ಕೋಮು ಗಳʼ ಇರಿಯುವುದಾ ಸಾಧನೆ? ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ? ತಾಯಿಂದಿರ ಆರ್ತನಾದ ಸರಕಾರದ ಕಿವಿಗೆ ಇಂಪಾದ ʼನಾದʼದಂತೆ ಕೇಳುತ್ತಿವೆಯಾ” ಎಂದು ಪ್ರಶ್ನಿಸಿದ್ದಾರೆ.

40% ಕಮಿಷನ್ ,ಕೋವಿಡ್ ಹೆಸರಿನಲ್ಲಿ ಕೊಳ್ಳೆ, ಅಧಿಕಾರಿಗಳ ವರ್ಗದಲ್ಲಿ ಪೇಮೆಂಟ್‌ ಕೋಟಾ ,ಪಿಎಸ್ಐ ನೇಮಕದಲ್ಲಿ ಕಾಸಿನಾಟ, ಸಹಾಯಕ ಪ್ರಾಧ್ಯಾಕರ ನೇಮಕದಲ್ಲೂ ನೋಟಿನಾಟ ಜೇಬು ತುಂಬಿಸಿಕೊಳ್ಳುವ ಧನದಾಟ ಬಿಟ್ಟರೆ, ಜನರಿಗೆ ಸರಕಾರ ಮಾಡಿದ್ದೇನು ಎಂದು ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.

ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ? ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ.. ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ ಎಂದು ಹೇಳಿದ್ದಾರೆ

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

10 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

13 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

15 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

15 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

16 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

16 hours ago