Featured

ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ : ಸರ್ಕಾರದ ವಿರುದ್ದ ಕುಮಾರಸ್ವಾಮಿ – Vishwanews24

ಕರಾವಳಿ ಕೆರಳಿದೆ.. ಕರ್ನಾಟಕ ಕೆರಳುವುದು ಬಾಕಿ ಇದೆ..

ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ

ಬೆಂಗಳೂರು: ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ. ಕರಾವಳಿ ಕೆರಳಿದೆ. ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವಿಟ್ ಮಾಡಿದ ಅವರು, ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ.ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ. ಸರಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರಕಾರದ ವರ್ಷದ ಸಾಧನೆ ಎಂದು ಲೇವಡಿ ಮಾಡಿದ್ದಾರೆ.

ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ʼಮತಕ್ಕಾಗಿ ಕೋಮು ಗಳʼ ಇರಿಯುವುದಾ ಸಾಧನೆ? ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ? ತಾಯಿಂದಿರ ಆರ್ತನಾದ ಸರಕಾರದ ಕಿವಿಗೆ ಇಂಪಾದ ʼನಾದʼದಂತೆ ಕೇಳುತ್ತಿವೆಯಾ” ಎಂದು ಪ್ರಶ್ನಿಸಿದ್ದಾರೆ.

40% ಕಮಿಷನ್ ,ಕೋವಿಡ್ ಹೆಸರಿನಲ್ಲಿ ಕೊಳ್ಳೆ, ಅಧಿಕಾರಿಗಳ ವರ್ಗದಲ್ಲಿ ಪೇಮೆಂಟ್‌ ಕೋಟಾ ,ಪಿಎಸ್ಐ ನೇಮಕದಲ್ಲಿ ಕಾಸಿನಾಟ, ಸಹಾಯಕ ಪ್ರಾಧ್ಯಾಕರ ನೇಮಕದಲ್ಲೂ ನೋಟಿನಾಟ ಜೇಬು ತುಂಬಿಸಿಕೊಳ್ಳುವ ಧನದಾಟ ಬಿಟ್ಟರೆ, ಜನರಿಗೆ ಸರಕಾರ ಮಾಡಿದ್ದೇನು ಎಂದು ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.

ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ? ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ.. ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ ಎಂದು ಹೇಳಿದ್ದಾರೆ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago