Featured

ಸಾವಿರಾರು ಜೀವ ಉಳಿಸಿ ಹುತಾತ್ಮರಾದ ಇಬ್ಬರು ಪೈಲಟ್ ಗಳು – Vishwanews24

ಬೆಂಗಳೂರು:  ಉನ್ನತ ದರ್ಜೆಗೇರಿಸಲ್ಪಟ್ಟ ಮಿರಾಜ್ 2000 ಯುದ್ಧ ವಿಮಾನವು ಪ್ರಾಯೋಗಿಕ ಹಾರಾಟ ನಡೆಸುತ್ತಿರುವ ವೇಳೆ ಶುಕ್ರವಾರ ಬೆಂಗಳೂರಿನ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಪತನಗೊಂಡು ಸಾವನ್ನಪ್ಪಿದ್ದ ಸ್ಕ್ವಾಡ್ರನ್ ಲೀಡರ್ಸ್ ಸಮೀರ್ ಅಬ್ರೋಲ್ ಮತ್ತು ಸಿದ್ಧಾರ್ಥ ನೇಗಿ ಅವರ ಸಮಯ ಪ್ರಜ್ಞೆ ಸಾವಿರಾರು ಜನರ ಪ್ರಾಣ ಉಳಿಸಿದೆ.

ವಿಮಾನ ಟೇಕ್-ಆಫ್ ಹಂತದಲ್ಲಿದ್ದಾಗಲೇ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಒಂದೋ ಬೆಂಕಿ ಹತ್ತಿದ ವಿಮಾನದ ಹಾರಾಟವನ್ನು ಮುಂದುವರಿಸುವುದೇ ಅಥವಾ ವಿಮಾನದಿಂದ ತಾವು ಸುರಕ್ಷಿತವಾಗಿ ಕೆಳಕ್ಕೆ ಹಾರುವುದೇ ಎಂಬ ತೀರ್ಮಾನವನ್ನು ಕೆಲವೇ ಸೆಕೆಂಡುಗಳಲ್ಲಿ ಇಬ್ಬರೂ ತೆಗೆದುಕೊಳ್ಳಬೇಕಿತ್ತು. ಅವರೇನಾದರೂ ವಿಮಾನ ಹಾರಾಟ ಮುಂದುವರಿಸಿ ನಂತರ ವಿಮಾನ ಎತ್ತರಕ್ಕೇರಿದ ನಂತರ ಕೆಳಕ್ಕೆ ಜಿಗಿದಿದ್ದೇ ಆದಲ್ಲಿ ಬೆಂಕಿಯುಗುಳುತ್ತಿದ್ದ ವಿಮಾನ ರನ್-ವೇಗಿಂತ ಕೆಲವೇ ದೂರದಲ್ಲಿದ್ದ ಜನಸಂದಣಿಯ ಪ್ರದೇಶಕ್ಕೆ ಅಪ್ಪಳಿಸಿ ಭಾರೀ ಸಾವು ನೋವು ಸಂಭವಿಸುತ್ತಿತ್ತು ಎಂದು ತಿಳಿದು ಬಂದಿದೆ.

ವಿಮಾನ ಹಾರಾಟ ಆರಂಭಿಸುತ್ತಲೇ ಅದರ ಟಯರ್ ಹೊರಕ್ಕೆ ಬಂದು ಅದರ ಲೋಹದ ಭಾಗ ರನ್-ವೇಗೆ ತಾಗಿತ್ತು. ಕ್ಷಣಾರ್ಧದಲ್ಲಿ ಪೈಲಟ್ ಗಳು ಟೇಕ್ ಆಫ್ ಸ್ಥಗಿತಗೊಳಿಸಿದ್ದು ಬೆಂಕಿ ಇಡೀ ವಿಮಾನವನ್ನು ಆಕ್ರಮಿಸಿಕೊಂಡಿದ್ದರಿಂದ ಇಬ್ಬರೂ ಪೈಲಟ್ ಗಳಿಗೆ ಯೋಚಿಸಲು ಹೆಚ್ಚು ಸಮಯವಿರಲಿಲ್ಲ. ಅವರಿಬ್ಬರು ಎಟಿಸಿಯನ್ನು ಕೊನೆಯ ಬಾರಿ ಸಂಪರ್ಕಿಸಿ ವಿಮಾನ ಹಾರಾಟ ನಿಲ್ಲಿಸಿ ಪ್ಯಾರಚೂಟ್ ಬಳಸಿ ಕೆಳಕ್ಕೆ ಜಿಗಿದಿದ್ದರೂ ಅವರು ವಿಮಾನ ನೆಲಕ್ಕಪ್ಪಳಿಸಿದ ಸ್ಥಳಕ್ಕೆ ಹತ್ತಿರದಲ್ಲಿಯೇ ಬಿದ್ದು ತೀವ್ರ ಸುಟ್ಟ ಗಾಯಗಳಿಂದಾಗಿ ಸಾವನ್ನಪ್ಪಿದ್ದರು.

ವಿಮಾನ ಎಚ್‍ಎಎಲ್ ವಿಮಾನ ನಿಲ್ದಾಣದ ತುದಿಯಲ್ಲಿ ಪತನಗೊಳ್ಳದೆ ಹೊರಗೇನಾದರೂ ಪತನಗೊಂಡಿದ್ದರೆ ಪರಿಣಾಮ ಊಹಿಸಲು ಅಸಾಧ್ಯವಾಗಿತ್ತು.

ವಿಮಾನ ನಿಲ್ದಾಣ ಕಂಪೌಂಡಿನ ಪೂರ್ವ ದಿಕ್ಕಿನಲ್ಲಿ ಟೆಕ್ ಪಾರ್ಕ್ ಮತ್ತು ಯೆಮಳೂರು ಗ್ರಾಮ ಸಂಪರ್ಕಿಸುವ ಕರಿಯಮ್ಮನ ಅಗ್ರಹಾರ ರಸ್ತೆಯಿತ್ತಲ್ಲದೆ ರಸ್ತೆ ತುಂಬಾ ವಾಹನಗಳಿಂದ ಗಿಜಿಗುಡುತ್ತಿತ್ತು, ಹಳೆ ಏರ್ ಪೋರ್ಟ್ ರಸ್ತೆ ಮತ್ತು ಮರಾಠಹಳ್ಳಿ ಪ್ರಾಂತ್ಯದಲ್ಲಿಯೂ ಇದೇ ಪರಿಸ್ಥಿತಿಯಿತ್ತು.

ವಿಮಾನ ಪತನಗೊಂಡ ಕೇವಲ 500 ಮೀಟರ್ ದೂರದಲ್ಲಿ ಮಂಜುನಾಥ ಲೇಔಟ್ ಇದೆಯಲ್ಲದೆ ಹಲವಾರು ಶಾಲೆಗಳೂ ಇಲ್ಲಿವೆ. ಈ ಸ್ಥಳದ ಪಕ್ಕದಲ್ಲಿಯೇ ಔಟರ್ ರಿಂಗ್ ರೋಡ್ ಇದ್ದು ಇಲ್ಲಿನ ಸುತ್ತಮುತ್ತ ಸಾವಿರಾರು ಮನೆಗಳಿವೆ. ಈ ಪ್ರದೇಶಗಳಲ್ಲಿ ವಿಮಾನ ಪತನವಾಗಿದ್ದರೆ ದೊಡ್ಡ ಮಟ್ಟದಲ್ಲೇ ಅನಾಹುತ ಸಂಭವಿಸಿರುತ್ತಿತ್ತು.

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

21 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

22 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

22 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

22 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

22 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

23 hours ago