ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂರು ಎಂದು ಮಿಥುನ್ ಹೇಳಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣ ಕುರಿತಂತೆ ನಟ ರಕ್ಷಿತ್ ಶೆಟ್ಟಿ ಕೂಡ ಪ್ರತಿಕ್ರಿಯಿಸಿದ್ದಾರೆ.
ಸೋಷಿಯಲ್ ಮೀಡಿಯಾದ ತಮ್ಮ ಖಾತೆಯಲ್ಲಿ ರಕ್ಷಿತ್ ಶೆಟ್ಟಿ ಈ ವಿವಾದದ ಕುರಿತಂತೆ ಬರೆದುಕೊಂಡಿದ್ದು, ಮಿಥುನ್ ರೈ ಹೆಸರನ್ನು ಬಳಸದೇ ತರಾಟೆಗೆ ತಗೆದುಕೊಂಡಿದ್ದಾರೆ. ‘ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?’ ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಮಿಥುನ್ ರೈ ಹೆಸರು ಬಳಸದೇ ಇದ್ದರೂ, ಇವರಿಗೆ ಕೊಟ್ಟ ಪ್ರತಿಕ್ರಿಯೆ ಎನ್ನುವುದು ಸ್ಪಷ್ಟವಾಗುತ್ತದೆ.
ಸಾಮಾನ್ಯವಾಗಿ ರಾಜಕೀಯ ವ್ಯಕ್ತಿಗಳ ಹೇಳಿಕೆಗಳಿಗೆ ರಕ್ಷಿತ್ ಶೆಟ್ಟಿ ಈವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಸ್ವತಃ ತಮ್ಮ ಮೇಲೆಯೇ ಹಲವರು ನೆಗೆಟಿವ್ ಕಾಮೆಂಟ್ ಮಾಡಿದಾಗಲೂ ರಕ್ಷಿತ್ ಮೌನವಹಿಸಿದ್ದರು. ಆದರೆ, ಉಡುಪಿ ಮಠಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದ್ದಾರೆ. ರಕ್ಷಿತ್ ಪೋಸ್ಟ್ ಗೆ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…