ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂರು ಎಂದು ಮಿಥುನ್ ಹೇಳಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣ ಕುರಿತಂತೆ ನಟ ರಕ್ಷಿತ್ ಶೆಟ್ಟಿ ಕೂಡ ಪ್ರತಿಕ್ರಿಯಿಸಿದ್ದಾರೆ.
ಸೋಷಿಯಲ್ ಮೀಡಿಯಾದ ತಮ್ಮ ಖಾತೆಯಲ್ಲಿ ರಕ್ಷಿತ್ ಶೆಟ್ಟಿ ಈ ವಿವಾದದ ಕುರಿತಂತೆ ಬರೆದುಕೊಂಡಿದ್ದು, ಮಿಥುನ್ ರೈ ಹೆಸರನ್ನು ಬಳಸದೇ ತರಾಟೆಗೆ ತಗೆದುಕೊಂಡಿದ್ದಾರೆ. ‘ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?’ ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಮಿಥುನ್ ರೈ ಹೆಸರು ಬಳಸದೇ ಇದ್ದರೂ, ಇವರಿಗೆ ಕೊಟ್ಟ ಪ್ರತಿಕ್ರಿಯೆ ಎನ್ನುವುದು ಸ್ಪಷ್ಟವಾಗುತ್ತದೆ.
ಸಾಮಾನ್ಯವಾಗಿ ರಾಜಕೀಯ ವ್ಯಕ್ತಿಗಳ ಹೇಳಿಕೆಗಳಿಗೆ ರಕ್ಷಿತ್ ಶೆಟ್ಟಿ ಈವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಸ್ವತಃ ತಮ್ಮ ಮೇಲೆಯೇ ಹಲವರು ನೆಗೆಟಿವ್ ಕಾಮೆಂಟ್ ಮಾಡಿದಾಗಲೂ ರಕ್ಷಿತ್ ಮೌನವಹಿಸಿದ್ದರು. ಆದರೆ, ಉಡುಪಿ ಮಠಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದ್ದಾರೆ. ರಕ್ಷಿತ್ ಪೋಸ್ಟ್ ಗೆ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…