Featured

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ದಾವಣಗೆರೆ ಮೂಲದ ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ – Vishwanews24

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ದಾವಣಗೆರೆ ಮೂಲದ ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

ಬೆಂಗಳೂರು: ಬುದ್ದಿಜೀವಿ ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ  ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು  ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ದಾವಣಗೆರೆಯ ಹಿಂದೂ ಸಂಘಟನೆಯ ಸಂಚಾಲಕ ಶಿವಾಜಿರಾವ್ ಜಾಧವ್‌  ಬಂಧನಕ್ಕೆ ಒಳಗಾದ ಆರೋಪಿ. 2 ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪತ್ರದಲ್ಲಿ ಏನಿತ್ತು?
ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ನೀವು ನಿಮ್ಮ ಕೊನೆ ದಿನಗಳನ್ನು ಎಣಿಸುತ್ತಿದ್ದೀರಿ ಎಂದು ಶಿವಾಜಿ ರಾವ್ ಪತ್ರ ಬರೆಯುತ್ತಿದ್ದ. ಪ್ರತಿ ಬೆದರಿಕೆ ಪತ್ರದಲ್ಲೂ ಒಂದೇ ರೀತಿಯ ಕೈ ಬರಹ ಇತ್ತು. ದಾವಣಗೆರೆಯಿಂದಲೇ ಈ ಪತ್ರಗಳು ಪೋಸ್ಟ್ ಆಗುತ್ತಿದ್ದವು.

ಎರಡು ವರ್ಷಗಳಿಂದ ಬರುತ್ತಿದ್ದ ಅನಾಮಧೇಯ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಏಳು ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿತ್ತು.

ಒಂದೇ ಒಂದು ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಪರೀಕ್ಷೆಯಿಂದ ದೃಢಪಟ್ಟಿತ್ತು. ತನಿಖೆಯಿಂದ ದಾವಣಗೆರೆ ಮೂಲದಿಂದ ಪತ್ರ ಬಂದಿದ್ದರೂ ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್‌ ಮಾಡಲಾಗಿತ್ತು.

ಪ್ರೊ. ಕೆ. ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ಧರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ, ಕುಂ.ವೀರಭದ್ರಪ್ಪ ಸೇರಿದಂತೆ 15ಕ್ಕೂ ಹೆಚ್ಚು ಲೇಖಕರಿಗೆ ಒಂದು ವರ್ಷದಿಂದ ಬೆದರಿಕೆ ಪತ್ರಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿತ್ತು.

ಈ ಬಗ್ಗೆ ಹಿಂದೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಪರಮೇಶ್ವರ್‌, ಬೆದರಿಕೆಗೆ ಒಳಗಾಗಿರುವ ಸಾಹಿತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲು ಕಮಿಷನರ್, ಡಿಜಿಪಿ ಅವರಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago