ಬೆಂಗಳೂರು: ಬುದ್ದಿಜೀವಿ ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ದಾವಣಗೆರೆಯ ಹಿಂದೂ ಸಂಘಟನೆಯ ಸಂಚಾಲಕ ಶಿವಾಜಿರಾವ್ ಜಾಧವ್ ಬಂಧನಕ್ಕೆ ಒಳಗಾದ ಆರೋಪಿ. 2 ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಪತ್ರದಲ್ಲಿ ಏನಿತ್ತು?
ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ನೀವು ನಿಮ್ಮ ಕೊನೆ ದಿನಗಳನ್ನು ಎಣಿಸುತ್ತಿದ್ದೀರಿ ಎಂದು ಶಿವಾಜಿ ರಾವ್ ಪತ್ರ ಬರೆಯುತ್ತಿದ್ದ. ಪ್ರತಿ ಬೆದರಿಕೆ ಪತ್ರದಲ್ಲೂ ಒಂದೇ ರೀತಿಯ ಕೈ ಬರಹ ಇತ್ತು. ದಾವಣಗೆರೆಯಿಂದಲೇ ಈ ಪತ್ರಗಳು ಪೋಸ್ಟ್ ಆಗುತ್ತಿದ್ದವು.
ಎರಡು ವರ್ಷಗಳಿಂದ ಬರುತ್ತಿದ್ದ ಅನಾಮಧೇಯ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಏಳು ಎಫ್ಐಆರ್ ದಾಖಲಾಗಿತ್ತು. ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿತ್ತು.
ಒಂದೇ ಒಂದು ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಪರೀಕ್ಷೆಯಿಂದ ದೃಢಪಟ್ಟಿತ್ತು. ತನಿಖೆಯಿಂದ ದಾವಣಗೆರೆ ಮೂಲದಿಂದ ಪತ್ರ ಬಂದಿದ್ದರೂ ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್ ಮಾಡಲಾಗಿತ್ತು.
ಪ್ರೊ. ಕೆ. ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ಧರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ, ಕುಂ.ವೀರಭದ್ರಪ್ಪ ಸೇರಿದಂತೆ 15ಕ್ಕೂ ಹೆಚ್ಚು ಲೇಖಕರಿಗೆ ಒಂದು ವರ್ಷದಿಂದ ಬೆದರಿಕೆ ಪತ್ರಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿತ್ತು.
ಈ ಬಗ್ಗೆ ಹಿಂದೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಪರಮೇಶ್ವರ್, ಬೆದರಿಕೆಗೆ ಒಳಗಾಗಿರುವ ಸಾಹಿತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲು ಕಮಿಷನರ್, ಡಿಜಿಪಿ ಅವರಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…