Featured

ಸಿಂಗಾಪುರದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಪತ್ತೆ ; ದಕ್ಷಿಣಾ ಆಫ್ರಿಕಾದಿಂದ ಬಂದಿದ್ದ ಇಬ್ಬರಲ್ಲಿ ಸೋಂಕು – Vishwanews24

ಸಿಂಗಾಪುರದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಪತ್ತೆ ; ದಕ್ಷಿಣಾ ಆಫ್ರಿಕಾದಿಂದ ಬಂದಿದ್ದ ಇಬ್ಬರಲ್ಲಿ ಸೋಂಕು – Vishwanews24

ಸಿಂಗಾಪುರ: ದಕ್ಷಿಣ ಆಫ್ರಿಕಾದಿಂದ ಸಿಂಗಾಪುರಕ್ಕೆ ಪ್ರಯಾಣ ಮಾಡಿದ್ದ ಇಬ್ಬರಲ್ಲಿ ಕೊರೊನಾ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌ ಪತ್ತೆಯಾಗಿದೆ. ಸಿಂಗಾಪುರದಲ್ಲೂ ಓಮಿಕ್ರಾನ್‌ ಮೊದಲ ಬಾರಿಗೆ ತನ್ನ ಖಾತೆ ತೆರೆದಿದೆ.

ಜೋಹನ್ಸ್‌ಬರ್ಗ್‌ನಿಂದ ಪ್ರಯಾಣಿಸಿದ್ದ ಇಬ್ಬರಲ್ಲಿ ಓಮಿಕ್ರಾನ್‌ ಪತ್ತೆಯಾಗಿರುವುದು ಪ್ರಾಥಮಿಕ ಪರೀಕ್ಷೆಯಿಂದ ದೃಢಪಟ್ಟಿದೆ. ಅವರನ್ನು ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ ಎಂದು ಸಿಂಗಾಪುರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸೋಂಕಿತರು ಪ್ರಯಾಣಿಸಿದ್ದ ವಿಮಾನದಲ್ಲೇ 19 ಮಂದಿ ಪ್ರಯಾಣ ಬೆಳೆಸಿದ್ದರು. ಅವರನ್ನೂ ಪರೀಕ್ಷೆ ಒಳಪಡಿಸಲಾಗಿದ್ದು, ಕೋವಿಡ್‌ ನೆಗೆಟಿವ್‌ ಬಂದಿದೆ. ಆದಾಗ್ಯೂ ಎಲ್ಲರನ್ನೂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಓಮಿಕ್ರಾನ್‌ ಸೋಂಕಿತರು ಕೋವಿಡ್‌ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಕೆಮ್ಮು ಮತ್ತು ಗಂಟಲು ಕೆರೆತದ ಸೌಮ್ಯ ಲಕ್ಷಣಗಳು ಇದ್ದ ಕಾರಣ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸೋಂಕಿತರಲ್ಲಿ ಒಬ್ಬರು 44 ವಯಸ್ಸಿನ (ಪುರುಷ) ಸಿಂಗಾಪುರ ಮೂಲದವರೇ ಆಗಿದ್ದಾರೆ. ಅವರು ಮೊಜಾಂಬಿಕ್‌ ಮೂಲಕ ಜೋಹಾನ್ಸ್‌ಬರ್ಗ್‌ಗೆ ತೆರಳಿದ್ದರು. ನ.29ರಂದು ಅವರು ಮೆಜಾಂಬಿಕ್‌ನಿಂದ ತೆರಳುವಾಗ ನಡೆಸಿದ ಪರೀಕ್ಷೆಯಲ್ಲಿ ಕೋವಿಡ್‌ ನೆಗೆಟಿವ್‌ ಬಂದಿತ್ತು. ಮತ್ತೊಬ್ಬರು 41 ವಯಸ್ಸಿನ ಮಹಿಳೆ ಸಿಂಗಾಪುರದವರೇ ಆಗಿದ್ದು, ದಕ್ಷಿಣ ಆಫ್ರಿಕಾದಿಂದ ನೇರವಾಗಿ ಆಗಮಿಸಿದ್ದರು ಎಂದು ಸಚಿವಾಲಯವು ಮಾಹಿತಿ ನೀಡಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago