ಚಂಡೀಗಢ, : ಪುಲ್ವಾಮಾದಲ್ಲಿ ನಡೆದ ಉಗ್ರಕೃತ್ಯಕ್ಕೆ ಸಂಬಂಧಪಟ್ಟಂತೆ, ಪಂಜಾಬ್ ಅಸೆಂಬ್ಲಿ ಆವರಣದಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿದ್ದು, ಸಿಆರ್ ಪಿಎಫ್ ಯೋಧರ ಮೇಲೆ ನಡೆದ ದಾಳಿಗೆ, ಪಾಕಿಸ್ತಾನವನ್ನು ದೂಷಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ ಅವರು, ಯಾರೋ ಒಬ್ಬ ಮಾಡಿದ ಪೈಶಾಚಿಕ ಕೃತ್ಯಕ್ಕೆ ಇಡೀ ದೇಶವನ್ನು ದೂಷಿಸುವುದು ತಪ್ಪು. ಇದಕ್ಕೆ ಸಂಬಂಧಪಟ್ಟ ಸಂಘಟನೆಯನ್ನೋ ಅಥವಾ ವ್ಯಕ್ತಿಯನ್ನು ದೂಷಿಸಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಪಾಕ್ ತಪ್ಪು ಮಾಡಿಲ್ಲ ಎಂಬುವುದಾಗಿ ಸಮರ್ಥಿಸಿಕೊಂಡಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ, ಭಯೋತ್ಪಾದನಾ ಕೃತ್ಯಕ್ಕೆ ಕುಮ್ಮುಕ್ಕು ಸಿಗುತ್ತಿರುವುದೇ ಪಾಕಿಸ್ತಾನದಲ್ಲಿ, ಮೊದಲು ಅವರಿಗೆ ತಕ್ಕ ಉತ್ತರವನ್ನು ನೀಡಬೇಕಿದೆ ಎಂದು ಹೇಳಿದ್ದರು. ಆದರೆ, ಅವರದೇ ಸರಕಾರದ ಮಂತ್ರಿ ನವಜೋತ್ ಸಿದ್ದು ವ್ಯತಿರಿಕ್ತ ಹೇಳಿಕೆಯನ್ನು ನೀಡಿ, ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.
ಪುಲ್ವಾಮಾದಲ್ಲಿ ನಡೆದ ಘಟನೆಯನ್ನು ಕಟುವಾಗಿ ಖಂಡಿಸುತ್ತೇನೆ, ಇದು ಹೇಡಿಗಳು ಮಾಡುವ ಕೆಲಸ. ಉಗ್ರಕೃತ್ಯಕ್ಕೆ ಶಾಸ್ವತ ಪರಿಹಾರ ಸಿಗಬೇಕಾಗಿದೆ. ಇದು ಸಾಧ್ಯವಾಗುವುದು ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸುವುದರಿಂದ ಮಾತ್ರ ಸಾಧ್ಯ ಎಂದು ಟ್ವೀಟ್ ಮಾಡಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…