ಚಂಡೀಗಢ, : ಪುಲ್ವಾಮಾದಲ್ಲಿ ನಡೆದ ಉಗ್ರಕೃತ್ಯಕ್ಕೆ ಸಂಬಂಧಪಟ್ಟಂತೆ, ಪಂಜಾಬ್ ಅಸೆಂಬ್ಲಿ ಆವರಣದಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿದ್ದು, ಸಿಆರ್ ಪಿಎಫ್ ಯೋಧರ ಮೇಲೆ ನಡೆದ ದಾಳಿಗೆ, ಪಾಕಿಸ್ತಾನವನ್ನು ದೂಷಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ ಅವರು, ಯಾರೋ ಒಬ್ಬ ಮಾಡಿದ ಪೈಶಾಚಿಕ ಕೃತ್ಯಕ್ಕೆ ಇಡೀ ದೇಶವನ್ನು ದೂಷಿಸುವುದು ತಪ್ಪು. ಇದಕ್ಕೆ ಸಂಬಂಧಪಟ್ಟ ಸಂಘಟನೆಯನ್ನೋ ಅಥವಾ ವ್ಯಕ್ತಿಯನ್ನು ದೂಷಿಸಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಪಾಕ್ ತಪ್ಪು ಮಾಡಿಲ್ಲ ಎಂಬುವುದಾಗಿ ಸಮರ್ಥಿಸಿಕೊಂಡಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ, ಭಯೋತ್ಪಾದನಾ ಕೃತ್ಯಕ್ಕೆ ಕುಮ್ಮುಕ್ಕು ಸಿಗುತ್ತಿರುವುದೇ ಪಾಕಿಸ್ತಾನದಲ್ಲಿ, ಮೊದಲು ಅವರಿಗೆ ತಕ್ಕ ಉತ್ತರವನ್ನು ನೀಡಬೇಕಿದೆ ಎಂದು ಹೇಳಿದ್ದರು. ಆದರೆ, ಅವರದೇ ಸರಕಾರದ ಮಂತ್ರಿ ನವಜೋತ್ ಸಿದ್ದು ವ್ಯತಿರಿಕ್ತ ಹೇಳಿಕೆಯನ್ನು ನೀಡಿ, ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.
ಪುಲ್ವಾಮಾದಲ್ಲಿ ನಡೆದ ಘಟನೆಯನ್ನು ಕಟುವಾಗಿ ಖಂಡಿಸುತ್ತೇನೆ, ಇದು ಹೇಡಿಗಳು ಮಾಡುವ ಕೆಲಸ. ಉಗ್ರಕೃತ್ಯಕ್ಕೆ ಶಾಸ್ವತ ಪರಿಹಾರ ಸಿಗಬೇಕಾಗಿದೆ. ಇದು ಸಾಧ್ಯವಾಗುವುದು ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸುವುದರಿಂದ ಮಾತ್ರ ಸಾಧ್ಯ ಎಂದು ಟ್ವೀಟ್ ಮಾಡಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…