ಅಯೋಧ್ಯೆ: ಸಿಎಂ ಆಗಿ ನಾನು ತಾರತಮ್ಯ ಮಾಡಲ್ಲ, ಹಿಂದೂವಾಗಿ ಅಯೋಧ್ಯೆಯ ಮಸೀದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಆಗಿ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನಡೆದಿದ್ದು, ಇದನ್ನ ಸುಸೂತ್ರವಾಗಿ ನಡೆಸುವಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾತ್ರ ಕೂಡ ಬಹುಮುಖ್ಯವಾಗಿದೆ.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಜೊತೆಗಿದ್ದ ಸಿಎಂ ಯೋಗಿ ಆದಿತ್ಯನಾಥ್, ಸಂಪೂರ್ಣ ಧಾರ್ಮಿಕ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು. ಈ ಹಿನ್ನೆಲೆ ಈ ರೀತಿಯ ಮಸೀದಿ ಕಾರ್ಯಕ್ರಮ ಅಯೋಧ್ಯೆಯಲ್ಲಿ ಮುಸ್ಲಿಂ ಸಮುದಾಯದವರು ನಡೆಸಿದರೆ ತಾವು ಪಾಲ್ಗೊಳ್ಳುತ್ತೀರಾ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ.
“ಮಸೀದಿಯ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ನನ್ನನ್ನ ಆಹ್ವಾನಿಸುತ್ತಾರೆ ಎಂದು ನಿಮಗೆ ಅನಿಸುತ್ತಿದೆಯಾ? ಎಂದು ಪ್ರಶ್ನಿಸಿದ ಸಿಎಂ ಯೋಗಿ, ನನ್ನನ್ನ ಆಹ್ವಾನಿಸುವ ಬಗ್ಗೆ ನನಗೆ ಸಮಸ್ಯೆಯಾಗುವುದಕ್ಕಿಂತ ಜಾಸ್ತಿ ಅವರಿಗೆ ಸಮಸ್ಯೆಯಾಗುತ್ತಿರಬಹುದು ಎಂದು ರಾಷ್ಟ್ರೀಯ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
“ಒಬ್ಬ ಮುಖ್ಯಮಂತ್ರಿಯಾಗಿ ನಾನು ಜಾತಿ, ಧರ್ಮದ ಬಗ್ಗೆ ತಾರತಮ್ಯ ಮಾಡುವಂತಿಲ್ಲ. ಆದರೆ ಒಬ್ಬ ಯೋಗಿ ಹಾಗೂ ಹಿಂದೂವಾಗಿ ನಾನು ಅಂತಹ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಯಾಕೆಂದರೆ ಅದು ನನ್ನ ಧರ್ಮವನ್ನ ಪಾಲಿಸುವ ನನ್ನ ಹಕ್ಕು ಆಗಿದೆ” ಎಂದು ತಿಳಿಸಿದ್ದಾರೆ.
ಇದೇ ವೇಳೆ ಮುಸ್ಲಿಂ ಸಮುದಾಯದಿಂದ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ ಇಕ್ಬಾಲ್ ಅನ್ಸಾರಿ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್, “ಇಕ್ಬಾಲ್ ಅನ್ಸಾರಿ ಸುಪ್ರೀಂಕೋರ್ಟ್ನ ತೀರ್ಪನ್ನ ಸ್ವಾಗತಿಸಿದಕ್ಕೆ ಧನ್ಯವಾದಗಳು. ಅವರಿಂದ ಇತರರು ಪಾಲಿಸುವ ವಿಚಾರ ಅನೇಕವಿದೆ. ರಾಮಜನ್ಮ ಸ್ಥಳ ಪ್ರಕರಣದ ಸಂಬಂಧ ಕೋರ್ಟ್ ಮೆಟ್ಟಿಲೇರಿ ಹೋರಾಟ ನಡೆಸಿದ್ದರು ಅವರಿಗೆ ಅಯೋಧ್ಯೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ.
ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರತಿಬಿಂಬವಾಗಿದೆ” ಎಂದು ಹೇಳಿದ ಯೋಗಿ, ಎಲ್ಲಾದರೂ ಹಿಂದೂ ವ್ಯಕ್ತಿಯೊಬ್ಬ ಪಾಕಿಸ್ತಾನ ಅಥವಾ ಅಫಘಾನಿಸ್ತಾನದಲ್ಲಿ ದೇವಾಲಯ ಸಂಬಂಧ ಹೋರಾಟ ನಡೆಸಿದ್ದರೆ ಸುರಕ್ಷಿತವಾಗಿರುತ್ತಿದ್ದನಾ? ಎಂದು ಅವರು ಪ್ರಶ್ನಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…