ಸಿಎಂ ಆಗಿ ನಾನು ತಾರತಮ್ಯ ಮಾಡಲ್ಲ, ಆದರೆ ಒಬ್ಬ ಯೋಗಿ ಹಾಗೂ ಹಿಂದೂವಾಗಿ ಮಸೀದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ: ಯೋಗಿ ಆದಿತ್ಯನಾಥ್‌ -Vishwanews24

ಅಯೋಧ್ಯೆ: ಸಿಎಂ ಆಗಿ ನಾನು ತಾರತಮ್ಯ ಮಾಡಲ್ಲ, ಹಿಂದೂವಾಗಿ ಅಯೋಧ್ಯೆಯ ಮಸೀದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಖಡಕ್‌ ಆಗಿ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನಡೆದಿದ್ದು, ಇದನ್ನ ಸುಸೂತ್ರವಾಗಿ ನಡೆಸುವಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಪಾತ್ರ ಕೂಡ ಬಹುಮುಖ್ಯವಾಗಿದೆ.

ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಜೊತೆಗಿದ್ದ ಸಿಎಂ ಯೋಗಿ ಆದಿತ್ಯನಾಥ್‌, ಸಂಪೂರ್ಣ ಧಾರ್ಮಿಕ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು. ಈ ಹಿನ್ನೆಲೆ ಈ ರೀತಿಯ ಮಸೀದಿ ಕಾರ್ಯಕ್ರಮ ಅಯೋಧ್ಯೆಯಲ್ಲಿ ಮುಸ್ಲಿಂ ಸಮುದಾಯದವರು ನಡೆಸಿದರೆ ತಾವು ಪಾಲ್ಗೊಳ್ಳುತ್ತೀರಾ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ.

“ಮಸೀದಿಯ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ನನ್ನನ್ನ ಆಹ್ವಾನಿಸುತ್ತಾರೆ ಎಂದು ನಿಮಗೆ ಅನಿಸುತ್ತಿದೆಯಾ? ಎಂದು ಪ್ರಶ್ನಿಸಿದ ಸಿಎಂ ಯೋಗಿ, ನನ್ನನ್ನ ಆಹ್ವಾನಿಸುವ ಬಗ್ಗೆ ನನಗೆ ಸಮಸ್ಯೆಯಾಗುವುದಕ್ಕಿಂತ ಜಾಸ್ತಿ ಅವರಿಗೆ ಸಮಸ್ಯೆಯಾಗುತ್ತಿರಬಹುದು ಎಂದು ರಾಷ್ಟ್ರೀಯ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

“ಒಬ್ಬ ಮುಖ್ಯಮಂತ್ರಿಯಾಗಿ ನಾನು ಜಾತಿ, ಧರ್ಮದ ಬಗ್ಗೆ ತಾರತಮ್ಯ ಮಾಡುವಂತಿಲ್ಲ. ಆದರೆ ಒಬ್ಬ ಯೋಗಿ ಹಾಗೂ ಹಿಂದೂವಾಗಿ ನಾನು ಅಂತಹ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಯಾಕೆಂದರೆ ಅದು ನನ್ನ ಧರ್ಮವನ್ನ ಪಾಲಿಸುವ ನನ್ನ ಹಕ್ಕು ಆಗಿದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಮುಸ್ಲಿಂ ಸಮುದಾಯದಿಂದ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಇಕ್ಬಾಲ್‌ ಅನ್ಸಾರಿ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್‌, “ಇಕ್ಬಾಲ್‌ ಅನ್ಸಾರಿ ಸುಪ್ರೀಂಕೋರ್ಟ್‌ನ ತೀರ್ಪನ್ನ ಸ್ವಾಗತಿಸಿದಕ್ಕೆ ಧನ್ಯವಾದಗಳು. ಅವರಿಂದ ಇತರರು ಪಾಲಿಸುವ ವಿಚಾರ ಅನೇಕವಿದೆ. ರಾಮಜನ್ಮ ಸ್ಥಳ ಪ್ರಕರಣದ ಸಂಬಂಧ ಕೋರ್ಟ್‌ ಮೆಟ್ಟಿಲೇರಿ ಹೋರಾಟ ನಡೆಸಿದ್ದರು ಅವರಿಗೆ ಅಯೋಧ್ಯೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ.

ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರತಿಬಿಂಬವಾಗಿದೆ” ಎಂದು ಹೇಳಿದ ಯೋಗಿ, ಎಲ್ಲಾದರೂ ಹಿಂದೂ ವ್ಯಕ್ತಿಯೊಬ್ಬ ಪಾಕಿಸ್ತಾನ ಅಥವಾ ಅಫಘಾನಿಸ್ತಾನದಲ್ಲಿ ದೇವಾಲಯ ಸಂಬಂಧ ಹೋರಾಟ ನಡೆಸಿದ್ದರೆ ಸುರಕ್ಷಿತವಾಗಿರುತ್ತಿದ್ದನಾ? ಎಂದು ಅವರು ಪ್ರಶ್ನಿಸಿದ್ದಾರೆ.

Vishwa News 24

Recent Posts

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

14 minutes ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

20 minutes ago

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

21 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

21 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

22 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

22 hours ago